37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

ಶಿಶಿಲ : ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ, ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಎಂಬ ತುಳು ಯಕ್ಷಗಾನ ಕಥಾ ಪ್ರಸಂಗವು ನ.22ರಂದು ಶಿಶಿಲ ವೈಕುಂಠಪುರ ಚಾಮುಂಡೇಶ್ವರೀ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಡಿ. ಪುಷ್ಪಗಿರಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಂಚಿನಡ್ಕ ಸ್ವಾಮಿ ಕೊರಗಜ್ಜ ದೈವ ಸನ್ನಿಧಿ ಧರ್ಮದರ್ಶಿಗಳು ವೀರಪ್ಪ ಗೌಡ ಕೆ, ಶಿಶಿಲ ಗ್ರಾಮ ಪಂಚಾಯತು ಅಧ್ಯಕ್ಷ ಸುಧಿನ್ ಡಿ., ಶ್ರೀ ಶಿಶಿಲೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ಗೋಖಲೆ, ಶ್ರೀ ಶಿಶಿಲೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ ಹಾಗೂ ಇತರರು ಭಾಗವಹಿಸಲಿದ್ದಾರೆ.

ದಿಕ್ಕೂಚಿ ಭಾಷಣ ವಿಟ್ಲ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಬೊಳಂತಿ ಮುಗೇರು ಶಿಕ್ಷಕ ವಿಠಲ್ ನಾಯಕ್ ವಹಿಸಲಿದ್ದಾರೆ.

ಹಿರಿಯ ಗುರುಸ್ವಾಮಿಗಳಾದ ಅಣ್ಣಿ ಯಾನೇ ಪದ್ಮಯ್ಯ ಗೌಡ ಮುಚ್ಚಿರಡ್ಕ, ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಶಿಶಿಲ, ರಾಮಾನಾಥ ರೈ ಶಿಬರಾಜೆ, ವಿಠಲ್ ಗೌಡ ಉಪ್ಪರಡ್ಕ, ನೋಣಯ್ಯ ಗೌಡ ಮುಚ್ಚಿರಡ್ಕ, ಶಿಶಿಲ (ಇಂಡಿಯನ್ ಆರ್ಮಿಯಲ್ಲಿ ಸುಬೇದಾರ್ ರಾಗಿ 29 ವರ್ಷಗಳ ಸೇವೆ) ಗೌರವಾರ್ಪಣೆ ನಡೆಯಲಿದೆ.

Related posts

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!