22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

ಶಿಶಿಲ : ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ, ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಎಂಬ ತುಳು ಯಕ್ಷಗಾನ ಕಥಾ ಪ್ರಸಂಗವು ನ.22ರಂದು ಶಿಶಿಲ ವೈಕುಂಠಪುರ ಚಾಮುಂಡೇಶ್ವರೀ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಡಿ. ಪುಷ್ಪಗಿರಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಂಚಿನಡ್ಕ ಸ್ವಾಮಿ ಕೊರಗಜ್ಜ ದೈವ ಸನ್ನಿಧಿ ಧರ್ಮದರ್ಶಿಗಳು ವೀರಪ್ಪ ಗೌಡ ಕೆ, ಶಿಶಿಲ ಗ್ರಾಮ ಪಂಚಾಯತು ಅಧ್ಯಕ್ಷ ಸುಧಿನ್ ಡಿ., ಶ್ರೀ ಶಿಶಿಲೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ಗೋಖಲೆ, ಶ್ರೀ ಶಿಶಿಲೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ ಹಾಗೂ ಇತರರು ಭಾಗವಹಿಸಲಿದ್ದಾರೆ.

ದಿಕ್ಕೂಚಿ ಭಾಷಣ ವಿಟ್ಲ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಬೊಳಂತಿ ಮುಗೇರು ಶಿಕ್ಷಕ ವಿಠಲ್ ನಾಯಕ್ ವಹಿಸಲಿದ್ದಾರೆ.

ಹಿರಿಯ ಗುರುಸ್ವಾಮಿಗಳಾದ ಅಣ್ಣಿ ಯಾನೇ ಪದ್ಮಯ್ಯ ಗೌಡ ಮುಚ್ಚಿರಡ್ಕ, ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಶಿಶಿಲ, ರಾಮಾನಾಥ ರೈ ಶಿಬರಾಜೆ, ವಿಠಲ್ ಗೌಡ ಉಪ್ಪರಡ್ಕ, ನೋಣಯ್ಯ ಗೌಡ ಮುಚ್ಚಿರಡ್ಕ, ಶಿಶಿಲ (ಇಂಡಿಯನ್ ಆರ್ಮಿಯಲ್ಲಿ ಸುಬೇದಾರ್ ರಾಗಿ 29 ವರ್ಷಗಳ ಸೇವೆ) ಗೌರವಾರ್ಪಣೆ ನಡೆಯಲಿದೆ.

Related posts

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya
error: Content is protected !!