24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

ಶಿಶಿಲ : ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ, ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಎಂಬ ತುಳು ಯಕ್ಷಗಾನ ಕಥಾ ಪ್ರಸಂಗವು ನ.22ರಂದು ಶಿಶಿಲ ವೈಕುಂಠಪುರ ಚಾಮುಂಡೇಶ್ವರೀ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಡಿ. ಪುಷ್ಪಗಿರಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಂಚಿನಡ್ಕ ಸ್ವಾಮಿ ಕೊರಗಜ್ಜ ದೈವ ಸನ್ನಿಧಿ ಧರ್ಮದರ್ಶಿಗಳು ವೀರಪ್ಪ ಗೌಡ ಕೆ, ಶಿಶಿಲ ಗ್ರಾಮ ಪಂಚಾಯತು ಅಧ್ಯಕ್ಷ ಸುಧಿನ್ ಡಿ., ಶ್ರೀ ಶಿಶಿಲೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ಗೋಖಲೆ, ಶ್ರೀ ಶಿಶಿಲೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ ಹಾಗೂ ಇತರರು ಭಾಗವಹಿಸಲಿದ್ದಾರೆ.

ದಿಕ್ಕೂಚಿ ಭಾಷಣ ವಿಟ್ಲ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಬೊಳಂತಿ ಮುಗೇರು ಶಿಕ್ಷಕ ವಿಠಲ್ ನಾಯಕ್ ವಹಿಸಲಿದ್ದಾರೆ.

ಹಿರಿಯ ಗುರುಸ್ವಾಮಿಗಳಾದ ಅಣ್ಣಿ ಯಾನೇ ಪದ್ಮಯ್ಯ ಗೌಡ ಮುಚ್ಚಿರಡ್ಕ, ಬಾಲಕೃಷ್ಣ ಗೌಡ ಗಾಣದಕೊಟ್ಟಿಗೆ, ಶಿಶಿಲ, ರಾಮಾನಾಥ ರೈ ಶಿಬರಾಜೆ, ವಿಠಲ್ ಗೌಡ ಉಪ್ಪರಡ್ಕ, ನೋಣಯ್ಯ ಗೌಡ ಮುಚ್ಚಿರಡ್ಕ, ಶಿಶಿಲ (ಇಂಡಿಯನ್ ಆರ್ಮಿಯಲ್ಲಿ ಸುಬೇದಾರ್ ರಾಗಿ 29 ವರ್ಷಗಳ ಸೇವೆ) ಗೌರವಾರ್ಪಣೆ ನಡೆಯಲಿದೆ.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya
error: Content is protected !!