September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು.

ಕಾರ್ಯಕ್ರಮವನ್ನು ಜೈನ್ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಉದ್ಘಾಟಿಸಿ, “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವತ್ತ ಈ ವಿದ್ಯಾಸಂಸ್ಥೆ ಸದಾ ಮುಂದಾಗಿದೆ” ಎಂದು ಶ್ಲಾಘಿಸಿದರು.

ಬೆಳ್ತಂಗಡಿ ತಾಲೂಕಿನ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಾ ಕೇಸರಿ ಅವರು ಹಾಗೂ ನಿಟ್ಟಡೆ ಕ್ಲಸ್ಟರ್‌ ಸಿಆರ್ ಪಿ ಶ್ರೀಮತಿ ಆರತಿ ಶುಭ ಹಾರೈಸಿದರು. ಅದೇ ರೀತಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಅವರು, “ಸಂಸ್ಥೆಯು ಶಿಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಉತ್ತಮ ಮಟ್ಟಕ್ಕೆ ಬೆಳೆಯುತ್ತಿದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಈ ಕಾರ್ಯಕ್ರಮವು ಪೋಷಕರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ತಿಳಿಸಿದರು.

ಕುಕ್ಕೆಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕೆ, ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್, ಕಾಲೇಜಿನ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಗೋಪಾಲ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಅವರು, “ಸಂಸ್ಥಾಪಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಾಧ್ಯವಾಯಿತು” ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕುಂಭಶ್ರೀ ವೈಭವ ಸಮಿತಿಯ ಪ್ರಧಾನ ಅಧ್ಯಕ್ಷರಾದ ಶ್ರೀ ಹರೀಶ್ ಪೊಕ್ಕಿ, ಸಮಿತಿಯ ಅಧ್ಯಕ್ಷ ಅಶ್ವಿತ್ ಕುಲಾಲ್, ಶಿಕ್ಷಕ–ರಕ್ಷಕ ಸಂಘದ ಉಪಾಧ್ಯಕ್ಷ ವಸಂತ್ ಪಡೀಲ್, ಸಂಘದ ಎಲ್ಲಾ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಓಮನ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್.ಎನ್ ಹಾಗೂ ಶಿಕ್ಷಕ–ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.

ಒಟ್ಟು 9 ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.

ಫಲಿತಾಂಶ: ಕಿರಿಯ ವಿಭಾಗ: ಪ್ರಥಮ ಸಮಗ್ರ ಚಾಂಪಿಯನ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆ,
ದ್ವಿತೀಯ ಸಮಗ್ರ ಚಾಂಪಿಯನ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ವೇಣೂರು

ಹಿರಿಯ ವಿಭಾಗ: • ಪ್ರಥಮ ಸಮಗ್ರ ಚಾಂಪಿಯನ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ವೇಣೂರು
• ದ್ವಿತೀಯ ಸಮಗ್ರ ಚಾಂಪಿಯನ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕೆ ಡಿ

ಕಾರ್ಯಕ್ರಮವನ್ನು ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕ ಸುಮನ್ ಮತ್ತು ಆಂಗ್ಲ ಭಾಷಾ ಶಿಕ್ಷಕರಾದ ಶ್ರೀಮತಿ ರಶ್ಮಿ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ಮನೋಜ್ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ವಂದನೆ ಸಲ್ಲಿಸಿದರು.

Related posts

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!