
ನಾರಾವಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಜರುಗಿದ 72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲಾ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್. ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಲಭಿಸಿದೆ.

ಕಳೆದ ಹಲವಾರು ವರ್ಷಗಳಿಂದ ನಾರಾವಿ ಸೊಸೈಟಿಯಲ್ಲಿ ಸಿಇಓ ಆಗಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿದ್ದಾರೆ. ಇವರನ್ನು ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಹಾಗೂ ನಿರ್ದೇಶಕರು ಅಭಿನಂದಿಸಿದರು.











