September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್(ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನ.21, ರಂದು ಯಶಸ್ವಿಯಾಗಿ ನಡೆಸಲಾಯಿತು. ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ಅತಿಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಕಡಲತೀರದಲ್ಲಿ ಕಸ ಸಂಗ್ರಹ, ಪ್ಲಾಸ್ಟಿಕ್ ನಿವಾರಣೆ ಹಾಗೂ ತ್ಯಾಜ್ಯ ವಿಭಜನೆ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್ ನ ಅಧ್ಯಕ್ಷ ಯತೀಶ್ ರೈ,
ಪ್ರಾಣಿ ರಕ್ಷಣಾ ಮತ್ತು ಆಹಾರ ಕೇಂದ್ರದ ಶ್ರೀಮತಿ ರಜನಿ ಹಾಗೂ ದಾಮೋದರ ಶೆಟ್ಟಿ, ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥರಾದ ಶ್ರೀಮತಿ ಬಬಿತಾ ಆರ್. ನಾಥ್,ಕಾರ್ಯದರ್ಶಿಗಳಾದ ಶ್ರೀಮತಿ ಶಿವಾಣಿ ಆರ್. ನಾಥ್, ಟ್ರಸ್ಟಿ ಗಳಾದ ಜಯನಿ ಆರ್ ನಾಥ್, ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ,ಸಂಯೋಜಕರಾದ ಯಶವಂತ್ ಜಿ. ನಾಯಕ್ , ಪದವಿ ವಿಭಾಗ ಮುಖ್ಯಸ್ಥರಾದ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯಾ ಎನ್, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಸಂಸ್ಥೆಯ ಟ್ರಸ್ಟಿ ಯಜ್ನೇಶ್ ರಾಜ್ ಸ್ವಾಗತಿಸಿ, ಪರಿಸರ ಸಂರಕ್ಷಣೆ, ಸಮುದ್ರ ಜೀವಿಗಳ ರಕ್ಷಣಾ ಜವಾಬ್ದಾರಿ ಮತ್ತು ಸಮಾಜ ಸೇವೆಯು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ” ಎಂಬ ಮಹತ್ವದ ಮಾತುಗಳೊಂದಿಗೆ ಧನ್ಯವಾದ ಸಮರ್ಪಿಸಿದರು.

ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ನಾಗರಿಕತನ ಮತ್ತು ಪರಿಸರ ಕಾಳಜಿ ಬೆಳೆಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಬೇಕು ಎಂಬ ಆಶಯದೊಂದಿಗೆ ಸಂಸ್ಥೆಯ ಆಡಳಿತ ಮಂಡಳಿಯು ಸಮಾಜಮುಖಿ ಚಟುವಟಿಕೆಗಳಿಗೆ ಪ್ರೋತ್ಸಾಹವನ್ನು ನೀಡಿ ,ಮೆಚ್ಚುಗೆ ವ್ಯಕ್ತಪಡಿಸಿತು.

Related posts

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya
error: Content is protected !!