25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಧರ್ಮಸ್ಥಳ: ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನ.22 ರಂದು ಬೆಳಗ್ಗೆ 9:30ಕ್ಕೆ ಧರ್ಮಸ್ಥಳ ದ್ವಾರದ ಬಳಿ ಶಿಲಾನ್ಯಾಸ ನಡೆಯಲಿದೆ.

614 ಕೋಟಿ ರೂ. ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಲಾಖೆಯ ಹೆದ್ದಾರಿಗಳ ನಿರ್ವಹಣೆ ಯೋಜನೆಯಲ್ಲಿ 30 ಕಿ.ಮೀ. ವ್ಯಾಪ್ತಿಯ ಈ ಸ್ಪರ್ ರಸ್ತೆ ಅಭಿವೃದ್ಧಿ ಹೊಂದಲಿದೆ. ಕಾಮಗಾರಿಯಲ್ಲಿ ರಸ್ತೆ ವಿಸ್ತರಣೆಗೊಳ್ಳಲಿದ್ದು, ಸುಸಜ್ಜಿತ ಚರಂಡಿಗಳು, ಅಗತ್ಯ ಸ್ಥಳಗಳಲ್ಲಿ ಕಿರು ಸೇತುವೆ, ಸೇತುವೆಗಳು, ಧರ್ಮಸ್ಥಳದ ಮುಖ್ಯದ್ವಾರದ ಬಳಿ ಬೆಂಗಳೂರು ಮೆಜೆಸ್ಟಿಕ್ ಮಾದರಿಯ ಅಂಡರ್ ಪಾಸ್, ರಾತ್ರಿಯ ಸಂಚಾರ ಸುರಕ್ಷತೆಗೆ ಪೇಟೆ ಪ್ರದೇಶಗಳಲ್ಲಿ ವಿಶೇಷ ವಿದ್ಯುತ್ ದೀಪಗಳ ಅಳವಡಿಕೆಯಾಗಲಿದೆ. ಈ ರಸ್ತೆಯು 4 ವರ್ಷಗಳ ಹಿಂದೆ ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಗೊಂಡಿದೆ. ಬಳಿಕ ಸಾಕಷ್ಟು ಸಮೀಕ್ಷೆಗಳು ನಡೆದಿವೆ. ಉಜಿರೆ- ಪೆರಿಯಶಾಂತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗಾಗಿ ಮರಗಳು ತೆರವುಗೊಳ್ಳಬೇಕಾಗಿದ್ದು ಅವುಗಳ ಲೆಕ್ಕಾಚಾರ ಪೂರ್ಣಗೊಂಡಿದೆ.

ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಅಥವಾ ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯನ್ನು ಸಂಪರ್ಕಿಸುವ ಒಳದಾರಿಗಳನ್ನು ಮೇಲ್ದರ್ಜೆಗೇರಿಸುವ ಸ್ಪರ್ ಯೋಜನೆಯಡಿ ನಡೆಯಲಿರುವ ಈ ಕಾಮಗಾರಿಯಿಂದ ಮುಂದಿನ ದಿನಗಳಲ್ಲಿ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂದರ್ಶಿಸುವವರಿಗೆ ಅನುಕೂಲವಾಗಲಿದೆ.

ಉಜಿರೆ ಪೇಟೆಯಿಂದ ಸಿದ್ಧವನ ತನಕ ಈಗಾಗಲೇ ರಸ್ತೆ ಅಭಿವೃದ್ಧಿ ಹೊಂದಿದೆ. ಆದರೆ ಇಲ್ಲಿ ಮತ್ತೆ ಕಾಮಗಾರಿ ನಡೆಯಲಿದೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. 2 ಕಿ.ಮೀ. ವ್ಯಾಪ್ತಿಯ ಈ ರಸ್ತೆ ಅಭಿವೃದ್ಧಿ ಹೊಂದಿದ್ದರೂ, ಇಲ್ಲಿ ಸರಿಯಾದ ಫುಟ್ಬಾತ್, ಪಾರ್ಕಿಂಗ್ ವ್ಯವಸ್ಥೆಗಳು ಇರುವುದಿಲ್ಲ ರಸ್ತೆ ಅಭಿವೃದ್ಧಿ ಹೊಂದಿರುವ ಜಾಗಗಳಲ್ಲಿ ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್‌ನಿಂದ ಇತರ ವಾಹನ ಸವಾರರು ಹೈರಾಣರಾಗುತ್ತಿದ್ದಾರೆ.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!