23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

ಉಜಿರೆ: ಮಂಗಳೂರಿನ ತಲಪಾಡಿ ಶಾರದಾ ವಿದ್ಯಾಲಯ ಶಾಲೆಯಲ್ಲಿ ನ.21 ರಂದು ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) “ಕ್ರೀಡಾ ಕೂಟ 2025” ಆಯೋಜಿಸಿದ್ದು, ಇಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸಿಯೋನ್ ದ್ವಿತೀಯ ಸ್ಥಾನ ಹಾಗೂ 400ಮೀ ಓಟ ತೃತೀಯ ಸ್ಥಾನ, ಗುಂಡೆಸೆತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸನ್ವಿತ್ ದ್ವಿತೀಯ ಸ್ಥಾನ, 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 400ಮೀ ಓಟ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ನಿಶಾ ತೃತೀಯ ಸ್ಥಾನ ಮತ್ತು 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 600ಮೀ ಓಟ ವಿದ್ಯಾರ್ಥಿನಿ ತೃಷ ತೃತೀಯ ಸ್ಥಾನ, 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಗುಂಡೆಸೆತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ.

ಶಾಲಾ ದೈಹಿಕ ಶಿಕ್ಷಕರಾದ ಶ್ರೀಮತಿ ರಾಜಮ್ಮ ಹಾಗೂ ಶ್ರೀ ಗಣೇಶ್ ತರಬೇತಿ ನೀಡಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya
error: Content is protected !!