July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ತಂಗಡಿ: ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾದ ನಿಸಾರ್ ಕುದ್ರಡ್ಕ ನೇತೃತ್ವದಲ್ಲಿ ಕಲ್ಲೇರಿ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎಸ್.ಡಿ.ಪಿ.ಐ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ವರ್ಷಗಳಿಂದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ದಿನನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಉದಾಹರಣೆಗಳಿವೆ. ದಿನನಿತ್ಯ ಈ ಮಾರ್ಗದಲ್ಲಿ ಶಾಲಾ- ಕಾಲೇಜು ಮಕ್ಕಳು ಓಡಾಡುತ್ತಿದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಪಂಚಾಯತ್ ಸದಸ್ಯರಾದ ಫೈಝಲ್ ಮೂರುಗೋಳಿ, ಅನ್ವರ್ ತೆಕ್ಕಾರು, ಬ್ಲಾಕ್ ನಾಯಕರುಗಳಾದ ಸಾದಿಕ್ ಕುದ್ರಡ್ಕ, ರಝಕ್ ಬಿ.ಎಂ, ರಝಕ್ ಕುದ್ರಡ್ಕ, ಶುಕೂರ್ ಕುಪ್ಪೆಟ್ಟಿ, ರೌಫ್ ಪುಂಜಾಲಕಟ್ಟೆ, ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Related posts

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!