25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಪಂಪ್ ಶೆಡ್ ಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಘಟನೆ ನ.21ರಂದು ನಡೆದಿದೆ.

ಸೀಟು-ಕೊಡಂಗೆ- ಕಾಯರ್ತೋಡಿ ರಸ್ತೆಯ ಸೀಟು ಚಡಾವಿನ ಕೆಳಭಾಗದಲ್ಲಿ ಪಂಚಾಯಿತಿಯ ನಲ್ಲಿ ನೀರಿನ ಬೋರ್ ವೆಲ್, ಪಂಪ್ ಶೆಡ್ ಇದೆ ಇಲ್ಲಿಂದ ನೀರನ್ನು ಕೊಟ್ರೊಟ್ಟು ಎಂಬಲ್ಲಿರುವ ಟ್ಯಾಂಕಿಗೆ ಕೊಂಡೊಯ್ದು, ಗ್ರಾಮದ 200 ಕ್ಕಿಂತ ಅಧಿಕ ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಇಲ್ಲಿರುವ ಪಂಪ್ ಶೆಡ್ ಬಾಗಿಲಿಗೆ ಬೀಗ ಹಾಕಲಾಗುತ್ತದೆ. ಕಿಡಿಗೇಡಿಗಳು ಶೆಡ್ ನ ಹಲವು ಭಾಗಗಳಿಗೆ ಕಲ್ಲು ಅಥವಾ ಇತರ ಆಯುಧದಿಂದ ಬಡಿದಿದ್ದು ಹಾನಿ ಉಂಟುಮಾಡಿ ಮಾಡಿರುವುದು ಕಂಡು ಬಂದಿದೆ.
ಪಂಪ್ ಶೆಡ್ ಸಮೀಪವೆ ವಿದ್ಯುತ್ ಪರಿವರ್ತಕ, ಶೆಡ್ ಒಳಗೆ ಮೀಟರ್, ಮೈನ್ ಸ್ವಿಚ್, ಸ್ಟಾರ್ಟರ್ ಸಹಿತ ಅನೇಕ ವಿದ್ಯುತ್ ಉಪಕರಣಗಳಿವೆ. ಇಂತಹ ಅಪಾಯಕಾರಿ ಸ್ಥಳದಲ್ಲಿ ಕಿಡಿಗೇಡಿಗಳು ಯಾವ ಉದ್ದೇಶಕ್ಕಾಗಿ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಮೂಡಿದೆ.

Related posts

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya
error: Content is protected !!