23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಪಂಪ್ ಶೆಡ್ ಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಘಟನೆ ನ.21ರಂದು ನಡೆದಿದೆ.

ಸೀಟು-ಕೊಡಂಗೆ- ಕಾಯರ್ತೋಡಿ ರಸ್ತೆಯ ಸೀಟು ಚಡಾವಿನ ಕೆಳಭಾಗದಲ್ಲಿ ಪಂಚಾಯಿತಿಯ ನಲ್ಲಿ ನೀರಿನ ಬೋರ್ ವೆಲ್, ಪಂಪ್ ಶೆಡ್ ಇದೆ ಇಲ್ಲಿಂದ ನೀರನ್ನು ಕೊಟ್ರೊಟ್ಟು ಎಂಬಲ್ಲಿರುವ ಟ್ಯಾಂಕಿಗೆ ಕೊಂಡೊಯ್ದು, ಗ್ರಾಮದ 200 ಕ್ಕಿಂತ ಅಧಿಕ ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಇಲ್ಲಿರುವ ಪಂಪ್ ಶೆಡ್ ಬಾಗಿಲಿಗೆ ಬೀಗ ಹಾಕಲಾಗುತ್ತದೆ. ಕಿಡಿಗೇಡಿಗಳು ಶೆಡ್ ನ ಹಲವು ಭಾಗಗಳಿಗೆ ಕಲ್ಲು ಅಥವಾ ಇತರ ಆಯುಧದಿಂದ ಬಡಿದಿದ್ದು ಹಾನಿ ಉಂಟುಮಾಡಿ ಮಾಡಿರುವುದು ಕಂಡು ಬಂದಿದೆ.
ಪಂಪ್ ಶೆಡ್ ಸಮೀಪವೆ ವಿದ್ಯುತ್ ಪರಿವರ್ತಕ, ಶೆಡ್ ಒಳಗೆ ಮೀಟರ್, ಮೈನ್ ಸ್ವಿಚ್, ಸ್ಟಾರ್ಟರ್ ಸಹಿತ ಅನೇಕ ವಿದ್ಯುತ್ ಉಪಕರಣಗಳಿವೆ. ಇಂತಹ ಅಪಾಯಕಾರಿ ಸ್ಥಳದಲ್ಲಿ ಕಿಡಿಗೇಡಿಗಳು ಯಾವ ಉದ್ದೇಶಕ್ಕಾಗಿ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಮೂಡಿದೆ.

Related posts

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya
error: Content is protected !!