September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರನ್ನು ನೇಮಕ ಮಾಡಿ ನ.21 ರಂದು ಆದೇಶ ಮಾಡಲಾಗಿದೆ.

ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು, ಕಾರ್ಕಳ, ಸುಳ್ಯ,ಸಂಪ್ಯ,ಪುತ್ತೂರು ಗ್ರಾಮಾಂತರ ಕಡೆ ಕರ್ತವ್ಯ ನಿರ್ವಹಿಸಿ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿ ಶೃಂಗೇರಿ,ಉಪ್ಪಿನಂಗಡಿ ವೃತ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.

ಇನ್ಸ್‌ಪೆಕ್ಟರ್ ರವಿ‌.ಬಿ.ಎಸ್ ಇವರ ಉತ್ತಮ ಕರ್ತವ್ಯ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಪದಕ, ರಾಷ್ಟ್ರಪತಿ ಪದಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ ಕೂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Related posts

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಆ.18: ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆ: ಬೆಳ್ತಂಗಡಿ ತಾಲೂಕಿನ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು: ಅನಿಲ್ ಕುಮಾರ್ ಯು

Suddi Udaya
error: Content is protected !!