24 C
ಪುತ್ತೂರು, ಬೆಳ್ತಂಗಡಿ
July 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೆಕೆಂಡರಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಹಲವು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.

ಪ್ರತಿಭಾ ಕಾರಂಜಿ – 2025-26 ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ತಮ್ಮ ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಸಾಧನೆ ಮಾಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗ ಧಾರ್ಮಿಕ ಪಠಣ – ಧ್ರುವ (ಪ್ರಥಮ ಸ್ಥಾನ), ಚಿತ್ರಕಲೆ – ನಿಹಾಲ್ ಆಚಾರ್ಯ (ಪ್ರಥಮ ಸ್ಥಾನ), ದೇಶಭಕ್ತಿ ಗೀತೆ – ಚಾರ್ವಿ (ತೃತೀಯ ಸ್ಥಾನ), ಪಿಕ್ ಅಂಡ್ ಸ್ಪೀಚ್ – ಸಾನ್ವಿ (ತೃತೀಯ ಸ್ಥಾನ), ಇಂಗ್ಲಿಷ್ ಕಂಠಪಾಠ– ಶಮಂತ್ (ತೃತೀಯ ಸ್ಥಾನ),

ಹಿರಿಯ ಪ್ರಾಥಮಿಕ ವಿಭಾಗ ಧಾರ್ಮಿಕ ಪಠಣ (ಸಂಸ್ಕೃತ)– ಅದ್ವಿತಿ ರಾವ್ (ಪ್ರಥಮ ಸ್ಥಾನ), ಇಂಗ್ಲಿಷ್ ಕಂಠಪಾಠ – ವೇದಾಂಶ್ ಚಂದ್ರ ವರ್ಮಾ (ಪ್ರಥಮ ಸ್ಥಾನ), ಭಕ್ತಿಗೀತೆ – ಅಕ್ಷರ್ (ಪ್ರಥಮ ಸ್ಥಾನ), ಚಿತ್ರಕಲೆ – ತನುಷ್ (ಪ್ರಥಮ ಸ್ಥಾನ), ಅಭಿನಯ ಗೀತೆ – ಸಾನ್ವಿ ಎಂ.ಕೆ (ದ್ವಿತೀಯ ಸ್ಥಾನ) , ಪಿಕ್ ಅಂಡ್ ಸ್ಪೀಚ್ – ಅದಿತಿ (ದ್ವಿತೀಯ ಸ್ಥಾನ), ದೇಶಭಕ್ತಿ ಗೀತೆ – ನಿಶಿಕಾ (ದ್ವಿತೀಯ ಸ್ಥಾನ), ಹಿಂದಿ ಕಂಠಪಾಠ– ಅಚಲಾ (ತೃತೀಯ ಸ್ಥಾನ), ಅರೇಬಿಕ್ ಪಠಣ – ಸುಜಾ (ತೃತೀಯ ಸ್ಥಾನ)ಮಣ್ಣಿನ ಮಾಡೆಲ್ – ಕವಿನ್ (ತೃತೀಯ ಸ್ಥಾನ),

ಪ್ರೌಢ ವಿಭಾಗ ಕವ್ವಾಲಿ – ಕವನ ಮತ್ತು ತಂಡ (ಪ್ರಥಮ ಸ್ಥಾನ), ಜನಪದ ನೃತ್ಯ– ಅನ್ವಿತಾ ಮತ್ತು ತಂಡ (ದ್ವಿತೀಯ ಸ್ಥಾನ), ಧಾರ್ಮಿಕ ಪಠಣ (ಸಂಸ್ಕೃತ) – ರವೀಶ್ (ದ್ವಿತೀಯ ಸ್ಥಾನ), ಧಾರ್ಮಿಕ ಪಠಣ (ಅರೇಬಿಕ್) – ಹಲೀಮತ್ ಫಹೀಜಾ (ದ್ವಿತೀಯ ಸ್ಥಾನ), ಸಂಸ್ಕೃತ ಭಾಷಣ – ತನ್ಮಯ ಕೃಷ್ಣ (ದ್ವಿತೀಯ ಸ್ಥಾನ), ಕವನ ವಾಚನ – ಬಿ.ತಸ್ಮಯ್ (ತೃತೀಯ ಸ್ಥಾನ), ಕನ್ನಡ ಭಾಷಣ – ದಿಶಾನ್ (ತೃತೀಯ ಸ್ಥಾನ)

ಕಿರಿಯ ಪ್ರಾಥಮಿಕ ವಿಭಾಗದ 2 ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ವಿಭಾಗದ 4 ವಿದ್ಯಾರ್ಥಿಗಳು ಹಾಗೂ ಪ್ರೌಢ ಶಾಲೆಯ 3 ವಿದ್ಯಾರ್ಥಿಗಳು, ಕವ್ವಾಲಿ ತಂಡದ 6 ವಿದ್ಯಾರ್ಥಿಗಳು ಹಾಗೂ ಜಾನಪದ ನೃತ್ಯದ 9 ವಿದ್ಯಾರ್ಥಿಗಳು
ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya
error: Content is protected !!