July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

ಬೆಳ್ತಂಗಡಿ : ಮೂಗ್ ಇಂಡಿಯಾ ಟೆಕ್ನಾಲಜಿ ಸೆಂಟರ್, ಬೆಂಗಳೂರು ಇವರಿಂದ 2025–26ನೇ ಸಾಲಿನ ಸಿ.ಎಸ್.ಆರ್. ಯೋಜನೆಯಡಿ ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಇಡ್ಲಿ ಸ್ಟೀಮರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಇದರ ಉದ್ಘಾಟನಾ ಕಾರ್ಯಕ್ರಮವು ನ. 21 ರಂದು ಸಿಯೋನ್ ಆಶ್ರಮದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮೂಗ್ ಇಂಡಿಯಾ ಟೆಕ್ನಾಲಜಿ ಸೆಂಟರ್‌ನ ಪ್ರಮುಖರಾದ ಶ್ರೀಮತಿ ಆಗ್ನೇಸ್ ನೋಯೆಲ್ ಮಿರಾಂದರವರು ಉದ್ಘಾಟಿಸಿ, ಆಶ್ರಮದ ಅಭಿವೃದ್ಧಿಗೆ ಹಾರೈಸಿದರು. ಈ ಸಂದರ್ಭದಲ್ಲಿ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, ಮೂಗ್ ಇಂಡಿಯಾ ಸಂಸ್ಥೆಯ ಮಹತ್ಕಾರ್ಯ ಹಾಗೂ ಸೇವಾಭಾವಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಿಯೋನ್ ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಸೌಮ್ಯ ಯು.ಪಿ., ಸಂಸ್ಥೆಯ ಆಡಳಿತ ವರ್ಗದವರು, ಸಿಬ್ಬಂದಿವರ್ಗ ಮತ್ತು ಆಶ್ರಮದ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!