23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮವನ್ನು ದ. ಕ. ಜಿ. ಪಂ. ಉ. ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ ಬೆಳ್ತಂಗಡಿ ಇಲ್ಲಿ ನಡೆಸಲಾಯಿತು.

ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರಪತಿ ಯೋಗಿಕ್ ಸೈನ್ಸ್ ಕಾಲೇಜಿನ ಡಾ. ಭಾಷಿಣಿ (BNYS) ಸಂಪನ್ಮೂಲ ವ್ಯಕ್ತಿ ಆಗಮಿಸಿದ್ದರು.

ಶ್ರೀಮತಿ ಲೀನಾ ಡಿಸೋಜ ಪ್ರಭಾರ ಮುಖ್ಯ ಶಿಕ್ಷಕರು ಕರ್ನೋಡಿ ಶಾಲೆ ಲಾಯಿಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಕುಮಾರ್ ಪ್ರೌಢ ಶಾಲಾ ಸಹ ಶಿಕ್ಷಕರು ಕರ್ನೋಡಿ ಶಾಲೆ ಲಾಯಿಲ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾದ ಡಾ.ಭಾಷಿಣಿ ರವರು “ಆಹಾರ ಮತ್ತು ಪೌಷ್ಟಿಕತೆ ಆರೋಗ್ಯಕರ ಜೀವನದ ಮೂಲಧಾರ. ಸರಿಯಾದ ಪ್ರಮಾಣದ ಪೌಷ್ಟಿಕಾಂಶ ಹೊಂದಿರುವ ಆಹಾರವನ್ನು ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ವೃದ್ಧಿಸಬಹುದು. ಜೊತೆಗೆ ಯೋಗಭ್ಯಾಸದ ಬಗ್ಗೆಯೂ ಮಾಹಿತಿ ನೀಡಿದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಖಿಲೇಶ್, ಬಿಂದು ಬಿ ಆರ್, ಸ್ಮೃತಿ ಆರ್, ಹರ್ಷಿತಾ ಕೆ ಎಸ್ ರವರು ಕಾರ್ಯಕ್ರಮವನ್ನು ಆಯೋಜಿಸಿ ನಡೆಸಿಕೊಟ್ಟರು.

Related posts

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!