22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಪಂಪ್ ಶೆಡ್ ಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಘಟನೆ ನ.21ರಂದು ನಡೆದಿದೆ.

ಸೀಟು-ಕೊಡಂಗೆ- ಕಾಯರ್ತೋಡಿ ರಸ್ತೆಯ ಸೀಟು ಚಡಾವಿನ ಕೆಳಭಾಗದಲ್ಲಿ ಪಂಚಾಯಿತಿಯ ನಲ್ಲಿ ನೀರಿನ ಬೋರ್ ವೆಲ್, ಪಂಪ್ ಶೆಡ್ ಇದೆ ಇಲ್ಲಿಂದ ನೀರನ್ನು ಕೊಟ್ರೊಟ್ಟು ಎಂಬಲ್ಲಿರುವ ಟ್ಯಾಂಕಿಗೆ ಕೊಂಡೊಯ್ದು, ಗ್ರಾಮದ 200 ಕ್ಕಿಂತ ಅಧಿಕ ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಇಲ್ಲಿರುವ ಪಂಪ್ ಶೆಡ್ ಬಾಗಿಲಿಗೆ ಬೀಗ ಹಾಕಲಾಗುತ್ತದೆ. ಕಿಡಿಗೇಡಿಗಳು ಶೆಡ್ ನ ಹಲವು ಭಾಗಗಳಿಗೆ ಕಲ್ಲು ಅಥವಾ ಇತರ ಆಯುಧದಿಂದ ಬಡಿದಿದ್ದು ಹಾನಿ ಉಂಟುಮಾಡಿ ಮಾಡಿರುವುದು ಕಂಡು ಬಂದಿದೆ.
ಪಂಪ್ ಶೆಡ್ ಸಮೀಪವೆ ವಿದ್ಯುತ್ ಪರಿವರ್ತಕ, ಶೆಡ್ ಒಳಗೆ ಮೀಟರ್, ಮೈನ್ ಸ್ವಿಚ್, ಸ್ಟಾರ್ಟರ್ ಸಹಿತ ಅನೇಕ ವಿದ್ಯುತ್ ಉಪಕರಣಗಳಿವೆ. ಇಂತಹ ಅಪಾಯಕಾರಿ ಸ್ಥಳದಲ್ಲಿ ಕಿಡಿಗೇಡಿಗಳು ಯಾವ ಉದ್ದೇಶಕ್ಕಾಗಿ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಮೂಡಿದೆ.

Related posts

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya
error: Content is protected !!