23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಪಂಪ್ ಶೆಡ್ ಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಘಟನೆ ನ.21ರಂದು ನಡೆದಿದೆ.

ಸೀಟು-ಕೊಡಂಗೆ- ಕಾಯರ್ತೋಡಿ ರಸ್ತೆಯ ಸೀಟು ಚಡಾವಿನ ಕೆಳಭಾಗದಲ್ಲಿ ಪಂಚಾಯಿತಿಯ ನಲ್ಲಿ ನೀರಿನ ಬೋರ್ ವೆಲ್, ಪಂಪ್ ಶೆಡ್ ಇದೆ ಇಲ್ಲಿಂದ ನೀರನ್ನು ಕೊಟ್ರೊಟ್ಟು ಎಂಬಲ್ಲಿರುವ ಟ್ಯಾಂಕಿಗೆ ಕೊಂಡೊಯ್ದು, ಗ್ರಾಮದ 200 ಕ್ಕಿಂತ ಅಧಿಕ ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಇಲ್ಲಿರುವ ಪಂಪ್ ಶೆಡ್ ಬಾಗಿಲಿಗೆ ಬೀಗ ಹಾಕಲಾಗುತ್ತದೆ. ಕಿಡಿಗೇಡಿಗಳು ಶೆಡ್ ನ ಹಲವು ಭಾಗಗಳಿಗೆ ಕಲ್ಲು ಅಥವಾ ಇತರ ಆಯುಧದಿಂದ ಬಡಿದಿದ್ದು ಹಾನಿ ಉಂಟುಮಾಡಿ ಮಾಡಿರುವುದು ಕಂಡು ಬಂದಿದೆ.
ಪಂಪ್ ಶೆಡ್ ಸಮೀಪವೆ ವಿದ್ಯುತ್ ಪರಿವರ್ತಕ, ಶೆಡ್ ಒಳಗೆ ಮೀಟರ್, ಮೈನ್ ಸ್ವಿಚ್, ಸ್ಟಾರ್ಟರ್ ಸಹಿತ ಅನೇಕ ವಿದ್ಯುತ್ ಉಪಕರಣಗಳಿವೆ. ಇಂತಹ ಅಪಾಯಕಾರಿ ಸ್ಥಳದಲ್ಲಿ ಕಿಡಿಗೇಡಿಗಳು ಯಾವ ಉದ್ದೇಶಕ್ಕಾಗಿ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಮೂಡಿದೆ.

Related posts

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya
error: Content is protected !!