July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಪಂಪ್ ಶೆಡ್ ಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಘಟನೆ ನ.21ರಂದು ನಡೆದಿದೆ.

ಸೀಟು-ಕೊಡಂಗೆ- ಕಾಯರ್ತೋಡಿ ರಸ್ತೆಯ ಸೀಟು ಚಡಾವಿನ ಕೆಳಭಾಗದಲ್ಲಿ ಪಂಚಾಯಿತಿಯ ನಲ್ಲಿ ನೀರಿನ ಬೋರ್ ವೆಲ್, ಪಂಪ್ ಶೆಡ್ ಇದೆ ಇಲ್ಲಿಂದ ನೀರನ್ನು ಕೊಟ್ರೊಟ್ಟು ಎಂಬಲ್ಲಿರುವ ಟ್ಯಾಂಕಿಗೆ ಕೊಂಡೊಯ್ದು, ಗ್ರಾಮದ 200 ಕ್ಕಿಂತ ಅಧಿಕ ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಇಲ್ಲಿರುವ ಪಂಪ್ ಶೆಡ್ ಬಾಗಿಲಿಗೆ ಬೀಗ ಹಾಕಲಾಗುತ್ತದೆ. ಕಿಡಿಗೇಡಿಗಳು ಶೆಡ್ ನ ಹಲವು ಭಾಗಗಳಿಗೆ ಕಲ್ಲು ಅಥವಾ ಇತರ ಆಯುಧದಿಂದ ಬಡಿದಿದ್ದು ಹಾನಿ ಉಂಟುಮಾಡಿ ಮಾಡಿರುವುದು ಕಂಡು ಬಂದಿದೆ.
ಪಂಪ್ ಶೆಡ್ ಸಮೀಪವೆ ವಿದ್ಯುತ್ ಪರಿವರ್ತಕ, ಶೆಡ್ ಒಳಗೆ ಮೀಟರ್, ಮೈನ್ ಸ್ವಿಚ್, ಸ್ಟಾರ್ಟರ್ ಸಹಿತ ಅನೇಕ ವಿದ್ಯುತ್ ಉಪಕರಣಗಳಿವೆ. ಇಂತಹ ಅಪಾಯಕಾರಿ ಸ್ಥಳದಲ್ಲಿ ಕಿಡಿಗೇಡಿಗಳು ಯಾವ ಉದ್ದೇಶಕ್ಕಾಗಿ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಮೂಡಿದೆ.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!