37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೆಕೆಂಡರಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಹಲವು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.

ಪ್ರತಿಭಾ ಕಾರಂಜಿ – 2025-26 ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ತಮ್ಮ ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಸಾಧನೆ ಮಾಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗ ಧಾರ್ಮಿಕ ಪಠಣ – ಧ್ರುವ (ಪ್ರಥಮ ಸ್ಥಾನ), ಚಿತ್ರಕಲೆ – ನಿಹಾಲ್ ಆಚಾರ್ಯ (ಪ್ರಥಮ ಸ್ಥಾನ), ದೇಶಭಕ್ತಿ ಗೀತೆ – ಚಾರ್ವಿ (ತೃತೀಯ ಸ್ಥಾನ), ಪಿಕ್ ಅಂಡ್ ಸ್ಪೀಚ್ – ಸಾನ್ವಿ (ತೃತೀಯ ಸ್ಥಾನ), ಇಂಗ್ಲಿಷ್ ಕಂಠಪಾಠ– ಶಮಂತ್ (ತೃತೀಯ ಸ್ಥಾನ),

ಹಿರಿಯ ಪ್ರಾಥಮಿಕ ವಿಭಾಗ ಧಾರ್ಮಿಕ ಪಠಣ (ಸಂಸ್ಕೃತ)– ಅದ್ವಿತಿ ರಾವ್ (ಪ್ರಥಮ ಸ್ಥಾನ), ಇಂಗ್ಲಿಷ್ ಕಂಠಪಾಠ – ವೇದಾಂಶ್ ಚಂದ್ರ ವರ್ಮಾ (ಪ್ರಥಮ ಸ್ಥಾನ), ಭಕ್ತಿಗೀತೆ – ಅಕ್ಷರ್ (ಪ್ರಥಮ ಸ್ಥಾನ), ಚಿತ್ರಕಲೆ – ತನುಷ್ (ಪ್ರಥಮ ಸ್ಥಾನ), ಅಭಿನಯ ಗೀತೆ – ಸಾನ್ವಿ ಎಂ.ಕೆ (ದ್ವಿತೀಯ ಸ್ಥಾನ) , ಪಿಕ್ ಅಂಡ್ ಸ್ಪೀಚ್ – ಅದಿತಿ (ದ್ವಿತೀಯ ಸ್ಥಾನ), ದೇಶಭಕ್ತಿ ಗೀತೆ – ನಿಶಿಕಾ (ದ್ವಿತೀಯ ಸ್ಥಾನ), ಹಿಂದಿ ಕಂಠಪಾಠ– ಅಚಲಾ (ತೃತೀಯ ಸ್ಥಾನ), ಅರೇಬಿಕ್ ಪಠಣ – ಸುಜಾ (ತೃತೀಯ ಸ್ಥಾನ)ಮಣ್ಣಿನ ಮಾಡೆಲ್ – ಕವಿನ್ (ತೃತೀಯ ಸ್ಥಾನ),

ಪ್ರೌಢ ವಿಭಾಗ ಕವ್ವಾಲಿ – ಕವನ ಮತ್ತು ತಂಡ (ಪ್ರಥಮ ಸ್ಥಾನ), ಜನಪದ ನೃತ್ಯ– ಅನ್ವಿತಾ ಮತ್ತು ತಂಡ (ದ್ವಿತೀಯ ಸ್ಥಾನ), ಧಾರ್ಮಿಕ ಪಠಣ (ಸಂಸ್ಕೃತ) – ರವೀಶ್ (ದ್ವಿತೀಯ ಸ್ಥಾನ), ಧಾರ್ಮಿಕ ಪಠಣ (ಅರೇಬಿಕ್) – ಹಲೀಮತ್ ಫಹೀಜಾ (ದ್ವಿತೀಯ ಸ್ಥಾನ), ಸಂಸ್ಕೃತ ಭಾಷಣ – ತನ್ಮಯ ಕೃಷ್ಣ (ದ್ವಿತೀಯ ಸ್ಥಾನ), ಕವನ ವಾಚನ – ಬಿ.ತಸ್ಮಯ್ (ತೃತೀಯ ಸ್ಥಾನ), ಕನ್ನಡ ಭಾಷಣ – ದಿಶಾನ್ (ತೃತೀಯ ಸ್ಥಾನ)

ಕಿರಿಯ ಪ್ರಾಥಮಿಕ ವಿಭಾಗದ 2 ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ವಿಭಾಗದ 4 ವಿದ್ಯಾರ್ಥಿಗಳು ಹಾಗೂ ಪ್ರೌಢ ಶಾಲೆಯ 3 ವಿದ್ಯಾರ್ಥಿಗಳು, ಕವ್ವಾಲಿ ತಂಡದ 6 ವಿದ್ಯಾರ್ಥಿಗಳು ಹಾಗೂ ಜಾನಪದ ನೃತ್ಯದ 9 ವಿದ್ಯಾರ್ಥಿಗಳು
ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya
error: Content is protected !!