22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕವರದಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ನ.22ರಂದು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜಿಂಲ್ಲಾಪ್ಪಾಡಿ ಬೀಡು, ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪಕೋಡಿ, ಮಹಾವೀರ ಜೈನ್ ಇಜೀಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್ ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು. ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya
error: Content is protected !!