September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಚಾರ್ಮಾಡಿ: ಆರ್ ಸಿ.ಸಿ ಚಾರ್ಮಾಡಿ- ಕಕ್ಕಿಂಜೆ ಮತ್ತು ಆರ್ ಸಿ.ಸಿ ನೆರಿಯ ಇವರು ರೋಟರಿ ಕ್ಲಬ್ ಬೆಳ್ತಂಗಡಿ ಸಹಕಾರದಿಂದ ಚಾರ್ಮಾಡಿಯ ಪಂಚಾಯತ್ ನಲ್ಲಿ, ಏಕ ಕಾಲದಲ್ಲಿ ಉಚಿತ ದಂತ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣ ಶಿಬಿರ ಇಂದು (ನ.22) ಏರ್ಪಡಿಸಿತು.


ಉಚಿತ ಆರೋಗ್ಯ ತಪಾಸಣಾ ಶಿಬಿರ ಎಸ್. ಡಿ. ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ, ಧರ್ಮ ರಕ್ಷಣಾ ವೇದಿಕೆ ಬೆಂದ್ರಾಳ ತೋಟತ್ತಾಡಿ ಈ ಸಂಸ್ಥೆಗಳ ಸಹಕಾರದಿಂದ ನಡೆಯಿತು ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಶಾಖೆ, ಕೆವಿಜಿ ದಂತ ಕಾಲೇಜು ಮತ್ತು ಆಸ್ಪತ್ರೆ, ಧರ್ಮ ರಕ್ಷಣಾ ವೇದಿಕೆ ಬೆಂದ್ರಾಳ ತೋಟತ್ತಾಡಿ ಈ ಸಂಸ್ಥೆಗಳ ಸಹಕಾರದಿಂದ ನಡೆಯಿತು.

ಬೆಳ್ತಂಗಡಿ ರೋಟರೀ ಕ್ಲಬ್ ಅಧ್ಯಕ್ಷರಾದ ಪ್ರೊ. ಪ್ರಕಾಶ ಪ್ರಭುಗಳು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಛಾಟನೆ ನೆರವೇರಿಸಿ, ಸಾರ್ವಜನಿಕರು ಈ ಉಚಿತ ಶಿಬಿರದ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದರು. ಮುಂಡಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಶ್ರೀ ಪ್ರಕಾಶ ನಾರಾಯಣರು ತಾ23ರಂದು ಸೋಮತಡ್ಕದಲ್ಲಿ ನಡೆಯುವ ಉಚಿತ ಕಣ್ಣಿನ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಶಾಖೆಯ ಅಧ್ಯಕ್ಯರಾದ ಡಾ ಆಶಾ ಪಿದಮಲೆಯವರು ಹಲ್ಲಿನ ಆರೋಗ್ಯ ಹಾಗೂ ಅದರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹೇಳಿದರು. ಎಸ್.ಡಿ.ಎಂ ವೈದ್ಯಕೀಯ ಸಂಘದ ವೈದ್ಯಕೀಯ ಪ್ರತಿನಿಧಿ ಡಾ ದೇವೇಂದ್ರ, ಡಾ. ರೋಹನ್ ದೀಕ್ಷಿತ್, ಡಾ.ಭವಿಷ್ಯ ಇವರು ಉಚಿತ ಆರೋಗ್ಯ ತಪಾಸಣೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ಕೊಟ್ಟರು. ಕೆವಿಜಿ ಕಾಲೇಜಿನ ಪೆರಿಯೋಡಾಂಟಿಕ್ಸ ವಿಭಾಗದ ಮುಖ್ಯಸ್ಥ ಡಾ.ಎಂ ಎಂ ದಯಾಕರ್ ಅವರು ಉಚಿತ ದಂತ ಚಿಕಿತ್ಸೆಗೆ ಸಂಬಂಧ ಪಟ್ಟ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಆರ್ ಸಿ ಸಿ ಚಾರ್ಮಾಡಿ-ಕಕ್ಕಿಂಜೆ ಇದರ ಅಧ್ಯಕ್ಷೆ ಶ್ರೀಮತಿ ಶಾರದಾರವರು, ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗಸಂಸ್ಥೆಯಾದ ಆರ್ ಸಿ ಸಿ ಇನ್ನೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಯಸಿದೆ. ಊರವರು ತನಗೆ ಪೂರ್ಣ ಸಹಕಾರ ನೀಡುತ್ತಾರೆ ಎಂದರು.
ಧರ್ಮ ರಕ್ಷಣಾ ವೇದಿಕೆ ಬೆಂದ್ರಾಳ ತೋಟತ್ತಾಡಿ ಅಧ್ಯಕ್ಷ ಶ್ರೀ ಪ್ರಸಾದ, ಕೆವಿಜಿ ದಂತ ಕಾಲೇಜಿನ ವೈದ್ಯೆ ಡಾ ಅನಿತಾ, ಪಿ.ಆರ್.ಓ ಶ್ರೀ ಜಯಂತ, ಉಪಸ್ಥಿತರಿದ್ದರು.
ಇಡೀ ಕಾರ್ಯಕ್ರಮದ ಮುಖ್ಯ ಸಂಚಾಲಕ ಓಬಯ್ಯರು ಕಾರ್ಯಕ್ರಮವನ್ನು ನಿರ್ವಹಿಸಿದರು

Related posts

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!