25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ , ಕಾರ್ಯದರ್ಶಿಯಾಗಿ ಕೊಕ್ಕಡ ಗ್ರಾಮದ ಮರಿಯಾಕೃಪಾ ನಿವಾಸಿ ಜೋಯೆಲ್ ಪಿರೇರಾ ಆಯ್ಕೆಯಾಗಿರುತ್ತಾರೆ.

ರಿತೇಶ್ ಎಂ. ಸ್ಟ್ರೆಲ್ಲಾ ರವರು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಒಡ್ರಲ್ಕೆಯ ನಿವಾಸಿಯಾಗಿದ್ದು ಸಮಾಜ ಸೇವಾ ಕ್ಷೇತ್ರದಲ್ಲಿ ಪದವೀಧರರಾಗಿದ್ದು, ವಿವಿಧೆಡೆಯ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ. ಪ್ರಸ್ತುತ ಊರಿನಲ್ಲಿ ಪ್ರಗತಿ ಪರ ಕೃಷಿಕರಾಗಿರುತ್ತಾರೆ.ಜೋಯೆಲ್ ಪಿರೇರಾ ರವರು ಸಿವಿಲ್ ಎಂಜಿನಿಯರ್ ಪದವೀಧರರಾಗಿದ್ದು ಬೆಂಗಳೂರಿನ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.

ಇತ್ತೀಚೆಗೆ ಶಿಬರಾಜೆಪಾದೆ ಗ್ರಾಮಾಭ್ಯುದಯಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಜೆಸಿಐ ಸರ್ವ ಸದಸ್ಯರ ಸಭೆಯಲ್ಲಿ ಎಲ್ಲಾ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಡಾ. ಶೋಭಾ ಪಿ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಾಮಿನೇಶನ್ ಕಮಿಟಿಯ ಮುಖ್ಯಸ್ಥರಾದ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಜೈನ್ ಚುನಾವಣೆಗಳನ್ನು ನಡೆಸಿಕೊಟ್ಟರು. ಕಾರ್ಯದರ್ಶಿ, ಪೂರ್ವ ಅಧ್ಯಕ್ಷರು, ಸದಸ್ಯರು ಭಾಗವಹಿಸಿದರು.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
error: Content is protected !!