September 6, 2026
ಅಭಿನಂದನೆಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ , ಕಾರ್ಯದರ್ಶಿಯಾಗಿ ಕೊಕ್ಕಡ ಗ್ರಾಮದ ಮರಿಯಾಕೃಪಾ ನಿವಾಸಿ ಜೋಯೆಲ್ ಪಿರೇರಾ ಆಯ್ಕೆಯಾಗಿರುತ್ತಾರೆ.

ರಿತೇಶ್ ಎಂ. ಸ್ಟ್ರೆಲ್ಲಾ ರವರು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಒಡ್ರಲ್ಕೆಯ ನಿವಾಸಿಯಾಗಿದ್ದು ಸಮಾಜ ಸೇವಾ ಕ್ಷೇತ್ರದಲ್ಲಿ ಪದವೀಧರರಾಗಿದ್ದು, ವಿವಿಧೆಡೆಯ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ. ಪ್ರಸ್ತುತ ಊರಿನಲ್ಲಿ ಪ್ರಗತಿ ಪರ ಕೃಷಿಕರಾಗಿರುತ್ತಾರೆ.ಜೋಯೆಲ್ ಪಿರೇರಾ ರವರು ಸಿವಿಲ್ ಎಂಜಿನಿಯರ್ ಪದವೀಧರರಾಗಿದ್ದು ಬೆಂಗಳೂರಿನ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.

ಇತ್ತೀಚೆಗೆ ಶಿಬರಾಜೆಪಾದೆ ಗ್ರಾಮಾಭ್ಯುದಯಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಜೆಸಿಐ ಸರ್ವ ಸದಸ್ಯರ ಸಭೆಯಲ್ಲಿ ಎಲ್ಲಾ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಡಾ. ಶೋಭಾ ಪಿ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಾಮಿನೇಶನ್ ಕಮಿಟಿಯ ಮುಖ್ಯಸ್ಥರಾದ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಜೈನ್ ಚುನಾವಣೆಗಳನ್ನು ನಡೆಸಿಕೊಟ್ಟರು. ಕಾರ್ಯದರ್ಶಿ, ಪೂರ್ವ ಅಧ್ಯಕ್ಷರು, ಸದಸ್ಯರು ಭಾಗವಹಿಸಿದರು.

Related posts

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya
error: Content is protected !!