23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರನ್ನು ನೇಮಕ ಮಾಡಿ ನ.21 ರಂದು ಆದೇಶ ಮಾಡಲಾಗಿದೆ.

ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು, ಕಾರ್ಕಳ, ಸುಳ್ಯ,ಸಂಪ್ಯ,ಪುತ್ತೂರು ಗ್ರಾಮಾಂತರ ಕಡೆ ಕರ್ತವ್ಯ ನಿರ್ವಹಿಸಿ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿ ಶೃಂಗೇರಿ,ಉಪ್ಪಿನಂಗಡಿ ವೃತ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.

ಇನ್ಸ್‌ಪೆಕ್ಟರ್ ರವಿ‌.ಬಿ.ಎಸ್ ಇವರ ಉತ್ತಮ ಕರ್ತವ್ಯ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಪದಕ, ರಾಷ್ಟ್ರಪತಿ ಪದಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ ಕೂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Related posts

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya
error: Content is protected !!