September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರನ್ನು ನೇಮಕ ಮಾಡಿ ನ.21 ರಂದು ಆದೇಶ ಮಾಡಲಾಗಿದೆ.

ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು, ಕಾರ್ಕಳ, ಸುಳ್ಯ,ಸಂಪ್ಯ,ಪುತ್ತೂರು ಗ್ರಾಮಾಂತರ ಕಡೆ ಕರ್ತವ್ಯ ನಿರ್ವಹಿಸಿ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿ ಶೃಂಗೇರಿ,ಉಪ್ಪಿನಂಗಡಿ ವೃತ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.

ಇನ್ಸ್‌ಪೆಕ್ಟರ್ ರವಿ‌.ಬಿ.ಎಸ್ ಇವರ ಉತ್ತಮ ಕರ್ತವ್ಯ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಪದಕ, ರಾಷ್ಟ್ರಪತಿ ಪದಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ ಕೂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

Suddi Udaya

ಕಾಯರ್ತಡ್ಕ ಪ್ರೌಢ ಶಾಲೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!