September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

ಬೆಳ್ತಂಗಡಿ : ಮೂಗ್ ಇಂಡಿಯಾ ಟೆಕ್ನಾಲಜಿ ಸೆಂಟರ್, ಬೆಂಗಳೂರು ಇವರಿಂದ 2025–26ನೇ ಸಾಲಿನ ಸಿ.ಎಸ್.ಆರ್. ಯೋಜನೆಯಡಿ ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಇಡ್ಲಿ ಸ್ಟೀಮರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಇದರ ಉದ್ಘಾಟನಾ ಕಾರ್ಯಕ್ರಮವು ನ. 21 ರಂದು ಸಿಯೋನ್ ಆಶ್ರಮದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮೂಗ್ ಇಂಡಿಯಾ ಟೆಕ್ನಾಲಜಿ ಸೆಂಟರ್‌ನ ಪ್ರಮುಖರಾದ ಶ್ರೀಮತಿ ಆಗ್ನೇಸ್ ನೋಯೆಲ್ ಮಿರಾಂದರವರು ಉದ್ಘಾಟಿಸಿ, ಆಶ್ರಮದ ಅಭಿವೃದ್ಧಿಗೆ ಹಾರೈಸಿದರು. ಈ ಸಂದರ್ಭದಲ್ಲಿ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, ಮೂಗ್ ಇಂಡಿಯಾ ಸಂಸ್ಥೆಯ ಮಹತ್ಕಾರ್ಯ ಹಾಗೂ ಸೇವಾಭಾವಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಿಯೋನ್ ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಸೌಮ್ಯ ಯು.ಪಿ., ಸಂಸ್ಥೆಯ ಆಡಳಿತ ವರ್ಗದವರು, ಸಿಬ್ಬಂದಿವರ್ಗ ಮತ್ತು ಆಶ್ರಮದ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!