22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

ಉಜಿರೆ :ನಮ್ಮ ಸುತ್ತ ಮುತ್ತಲಿನ ಪರಿಸರದ ಸ್ವಚ್ಚತೆ ನಮ್ಮೆಲ್ಲರ ಪ್ರಾಥಮಿಕ ಜವಾಬ್ದಾರಿ. ನಾವು ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಹಸ್ತಾಂತರಿಸಬೇಕಾದರೆ ಸ್ವಚ್ಛತೆಯ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರ ಭಾಗಿದಾರಿಕೆ ಬೇಕು. ಸಾಮಾಜಿಕ ಸಂಘ ಸಂಸ್ಥೆಗಳು ಸ್ವಚ್ಛತೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿಯನ್ನು ಮೂಡಿಸುವತ್ತ ಕಾರ್ಯಪ್ರವೃತರಾಗಬೇಕು ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಅಚಾರ್ಯ ಅವರು ಹೇಳಿದರು.

ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ಆಶ್ರಯದಲ್ಲಿ “ ಸ್ವಚ್ಛತಾ ಹೀ ಸೇವಾ “ ಧ್ಯೇಯದೊಂದಿಗೆ ನಡೆದ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡುತಿದ್ದರು.

ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೆಪೇಟೆ ಇದರ ಅಧ್ಯಕ್ಷ ಅಬುಬೂಕರ್.ಯು. ಹೆಚ್ ಸುಪ್ರೀಮ್ ಮಾತನಾಡಿ ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಗಳ ಜೊತೆ ಜೊತೆಗೆ ಸ್ವಚ್ಛತೆಯಂತಹ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ ನಡೆಸುತ್ತಿರುವುದು ಶ್ಲಾಘನೀಯ ಹಾಗೂ ಇಂತಹ ಸ್ವಚ್ಛತಾ ಕಾರ್ಯಕ್ರಮಗಳು ಎಲ್ಲರಿಗೂ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

ರೋಟರಿ ಕ್ಲಬ್ ಬೆಳ್ತಂಗಡಿಯ ಆಧ್ಯರಾದ ಪ್ರೊ. ಪ್ರಕಾಶ್ ಪಭು, ಹಳೆಪೇಟೆ ಉಜಿರೆ ಆಟೋ ಮಾಲಕ ಮತ್ತು ಚಾಲಕ ಸಂಘದ ಸ್ಥಾಪಕ ಅಧ್ಯಕ್ಷ ನಜೀರ್ ಕೆ, ಆದರ್ಶ ಸೇವಾ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಪ್ರಭು ಹಾಗೂ ಎಸ್ ವೈ ಎಸ್ ಉಜಿರೆ ಯುನಿಟ್ ಅಧ್ಯಕ್ಷ ಅಶನ್. ಹೆಚ್ ಅವರು ಹಸಿರು ನಿಶಾನೆ ತೋರಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಜಿರೆ ಟಿಬಿ ಕ್ರಾಸ್ ಪರಿಸರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಯ ಶ್ರಮದಾನ ಕಾರ್ಯಕ್ರಮವು ನಡೆಯಿತು.

ಬ್ಯಾಂಕ್ ನ ನಿರ್ದೇಶಕರಾದ ಡಿ ಬಾಸ್ಕರ ಆಚಾರ್ಯ, ಜಯಪ್ರಕಾಶ್ ಆಚಾರ್ಯ, ಭರತ್ ನಿಡ್ಪಳ್ಳಿ , ಲಾಲೈ ಗ್ರಾಮ ಪಂಚಾಯತ್ ಅಧ್ಯಕ್ಷ ಸಲೀಂ, ಒಕ್ಕಲಿಗ ಸಂಘದ ಗೌರವದ್ಯಕ್ಷರಾದ ಗೋಪಾಲಕೃಷ್ಣ ಜಿ ಕೆ , ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಂಘದ ಅಧ್ಯಕ್ಷ ಗಣೇಶ ಆಚಾರ್ಯ ಮೊಹಿದ್ದೀನ್ ಜುಮ್ಮಾ ಮಸೀದಿಯ ಕಾರ್ಯದರ್ಶಿ ಆರೀಸ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಶ್ವನಾಥ್.ಎಸ್ ಮತ್ತು ವಿದ್ಯಾರ್ಥಿಗಳು, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯರು, ಆದರ್ಶ ಸೇವಾ ಟ್ರಸ್ ನ ಸದಸ್ಯರು, ಆಟೋ ಚಾಲರು ಮತ್ತು ಮಾಲಕ ಅಸೋಸಿಯೇಷನ್ ಟಿ.ಬಿ.ಕಾಸ್ ಹಳಿಪೇಟೆ ಉಜಿರೆಯ ಸದಸ್ಯರು, ಚಾರ್ಟರ್ಡ್ ಅಕೌಂಟೆಂಟ್ ಅಭಿನಯ್ ಕುಲಾಲ್ ಬೆಳ್ತಂಗಡಿ, ಎಸ್. ವೈ.ಎಸ್, ಎಸ್.ಎಸ್.ಎಫ್ ಹಾಗೂ ಕೆ.ಎಂ.ಟಿ ಉಜಿರೆಯ ಸದಸ್ಯರು. ಬ್ಯಾಂಕಿನ ಗ್ರಾಹಕರು, ಶಾಖಾ ವ್ಯವಸ್ಥಾಪಕ ಲೋಕೇಶ್.ಎಸ್.ಆರ್ ಮತ್ತು ಸಿಬ್ಬಂದಿ ವರ್ಗ ಸ್ವಯಂ ಸೇವಕರಾಗಿ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!