22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

ಬೆಳ್ತಂಗಡಿ: ಕಳೆದ 3 ವರ್ಷಗಳಿಂದ ಅಶಕ್ತ ಕುಟುಂಬಗಳಿಗೆ, ಅನಾರೋಗ್ಯಪೀಡಿತರಿಗೆ 10ಲಕ್ಷಕ್ಕೂ ಮಿಕ್ಕಿ ಧನಸಹಾಯ ಮಾಡಿರುವ ತಾಲೂಕು ಸ್ಪಂದನ ಬಂಟರ ಸೇವಾ ತಂಡವು, ಇದೀಗ ತನ್ನ 50ನೇ ಸೇವಾಯೋಜನೆಯಾಗಿ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡಲು ಮುಂದಾಗಿದೆ.

ಓಡಿಲ್ಮಾಳ ಗ್ರಾಮದ ಕಟ್ಟದಬೈಲು ನಿವಾಸಿ ಗೀತಾ ಶೆಟ್ಟಿಯರಿಗೆ ಸ್ಪಂದನ ಸೇವಾ ತಂಡವು ಮನೆ ನಿರ್ಮಾಣ ಮಾಡಿಕೊಡುತ್ತಿದ್ದು ನ.21ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಯಮಿ ಶಶಿಧ‌ರ್ ಶೆಟ್ಟಿ ಬರೋಡ ನಡೆಸಿಕೊಟ್ಟರು. ಒಟ್ಟು 10ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದ್ದು ಬರುವ ಆರು ತಿಂಗಳ ಒಳಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಸ್ಪಂದನ ಸೇವಾ ತಂಡದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ ತಿಳಿಸಿದ್ದಾರೆ.ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ವಿಜಯ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ ಶೆಟ್ಟಿ ಕೊರಿಯಾರ್, ಬಂಟರ ಸಂಘದ ನಿರ್ದೇಶಕರಾದ ರಾಜು ಶೆಟ್ಟಿ ಬೆಂಗತ್ಯಾರು, ಆನಂದ ಶೆಟ್ಟಿ ಐಸಿರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ, ಸ್ಪಂದನ ಬಂಟರ ಸೇವಾ ತಂಡದ ಶ್ರೀನಿವಾಸ್‌ ಶೆಟ್ಟಿ, ಓಡಿಲ್ನಾಳ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್‌ ಶೆಟ್ಟಿ ಸಂಬೊಲ್ಯ, ಉಪಾಧ್ಯಕ್ಷೆ ರಂಜಿತಾ ಶೆಟ್ಟಿ, ಗೀತಾ ಶೆಟ್ಟಿ.ಜನಾರ್ಧನ್ ಶೆಟ್ಟಿ ಪೆರಿಂದಲೆ ಉಪಸ್ಥಿತರಿದ್ದರು.
ವಿಠಲ್‌ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರ್ವಹಿಸಿದರು

Related posts

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya
error: Content is protected !!