July 23, 2026
ಗ್ರಾಮಾಂತರ ಸುದ್ದಿ

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

ಬೆಳ್ತಂಗಡಿ: ಕಳೆದ 3 ವರ್ಷಗಳಿಂದ ಅಶಕ್ತ ಕುಟುಂಬಗಳಿಗೆ, ಅನಾರೋಗ್ಯಪೀಡಿತರಿಗೆ 10ಲಕ್ಷಕ್ಕೂ ಮಿಕ್ಕಿ ಧನಸಹಾಯ ಮಾಡಿರುವ ತಾಲೂಕು ಸ್ಪಂದನ ಬಂಟರ ಸೇವಾ ತಂಡವು, ಇದೀಗ ತನ್ನ 50ನೇ ಸೇವಾಯೋಜನೆಯಾಗಿ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡಲು ಮುಂದಾಗಿದೆ.

ಓಡಿಲ್ಮಾಳ ಗ್ರಾಮದ ಕಟ್ಟದಬೈಲು ನಿವಾಸಿ ಗೀತಾ ಶೆಟ್ಟಿಯರಿಗೆ ಸ್ಪಂದನ ಸೇವಾ ತಂಡವು ಮನೆ ನಿರ್ಮಾಣ ಮಾಡಿಕೊಡುತ್ತಿದ್ದು ನ.21ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಯಮಿ ಶಶಿಧ‌ರ್ ಶೆಟ್ಟಿ ಬರೋಡ ನಡೆಸಿಕೊಟ್ಟರು. ಒಟ್ಟು 10ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದ್ದು ಬರುವ ಆರು ತಿಂಗಳ ಒಳಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಸ್ಪಂದನ ಸೇವಾ ತಂಡದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ ತಿಳಿಸಿದ್ದಾರೆ.ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ವಿಜಯ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ ಶೆಟ್ಟಿ ಕೊರಿಯಾರ್, ಬಂಟರ ಸಂಘದ ನಿರ್ದೇಶಕರಾದ ರಾಜು ಶೆಟ್ಟಿ ಬೆಂಗತ್ಯಾರು, ಆನಂದ ಶೆಟ್ಟಿ ಐಸಿರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ, ಸ್ಪಂದನ ಬಂಟರ ಸೇವಾ ತಂಡದ ಶ್ರೀನಿವಾಸ್‌ ಶೆಟ್ಟಿ, ಓಡಿಲ್ನಾಳ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್‌ ಶೆಟ್ಟಿ ಸಂಬೊಲ್ಯ, ಉಪಾಧ್ಯಕ್ಷೆ ರಂಜಿತಾ ಶೆಟ್ಟಿ, ಗೀತಾ ಶೆಟ್ಟಿ.ಜನಾರ್ಧನ್ ಶೆಟ್ಟಿ ಪೆರಿಂದಲೆ ಉಪಸ್ಥಿತರಿದ್ದರು.
ವಿಠಲ್‌ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರ್ವಹಿಸಿದರು

Related posts

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya
error: Content is protected !!