25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯದ ಬರವಣಿಗೆ” ವಿಷಯದ ಕುರಿತು ನ. 24 ರಂದು ವಿಶೇಷ ಕಾರ್ಯಾಗಾರವನ್ನು ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಾಗಾರವು ವಿದ್ಯಾರ್ಥಿಗಳ ಸಾಹಿತ್ಯ ಜ್ಞಾನ ವಿಸ್ತರಣೆಗೆ ಮಹತ್ವದ ವೇದಿಕೆಯಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗೀತಾ. ಡಿ ಹಾಗೂ ಸಂದ್ಯಾ ಎನ್ ಭಾಗವಹಿಸಿ ಕನ್ನಡ ಸಾಹಿತ್ಯದ ಪಾರಂಪರ್ಯ, ಅದರ ಐತಿಹಾಸಿಕ ಬೆಳವಣಿಗೆ, ಆಧುನಿಕ ಸಾಹಿತ್ಯದ ಪ್ರವೃತ್ತಿಗಳು, ವಿವಿಧ ಸಾಹಿತ್ಯ ಪ್ರಕಾರಗಳ ವಿಶಿಷ್ಟತೆ, ಹಾಗೂ ಉತ್ತಮ ಸಾಹಿತ್ಯ ರಚನೆಗೆ ಅಗತ್ಯವಾದ ತಂತ್ರಗಳು ಮತ್ತು ವಿಧಾನಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಮತ್ತು ಮನದಟ್ಟು ಆಗುವಂತೆ ವಿವರಿಸಿದರು.

ಕಾರ್ಯಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೊ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಹಿತ್ಯ ಆಸಕ್ತಿ ಮತ್ತು ಕೌಶಲ್ಯವನ್ನು ಉತ್ತೇಜಿಸಿದರು.

ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ಕನ್ನಡ ಭಾಷಾ ನೈಪುಣ್ಯ, ಸಾಹಿತ್ಯದ ಅರ್ಥೈಸುವ ಸಾಮರ್ಥ್ಯ ಮತ್ತು ಬರವಣಿಗೆಯ ಕೌಶಲ್ಯವನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರವಹಿಸಿತು.

Related posts

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya
error: Content is protected !!