July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಅನುಮತಿ ಪಡೆಯದೆ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂದಾರು ಗ್ರಾಮದ ಪುನರಡ್ಕ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಹಲಸು ಮತ್ತು ಸಾಗುವಾನಿ ಮರಗಳನ್ನು ಕಡಿದು 14 ದಿಮ್ಮಿ ಮತ್ತು ಕಟ್ಟಿಗೆಯನ್ನಾಗಿ ಪರಿವರ್ತಿಸಿ ದಾಸ್ತಾನು ಮಾಡಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಂಚಾರಿ ಅರಣ್ಯ ದಳದ ಅಧಿಕಾರಿಗಳು ನ.21 ರಂದು ದಾಳಿ ಮಾಡಿ ಪತ್ತೆ ಹಚ್ಚಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಆರೋಪಿ ಕೊಯ್ಯೂರು ಗ್ರಾಮದ ಗುರ್ಬೊಟ್ಟು ನಿವಾಸಿ ದೂಜ ಎಂಬವರ ಮಗ ಪ್ರವೀಣ್ ವಿರುದ್ಧ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಪ್ರಕರಣ ದಾಖಲಾಯಿಸಿಕೊಂಡಿದ್ದಾರೆ.

ಮಂಗಳೂರು ಸಂಚಾರಿ ಅರಣ್ಯ ದಳದ ವಲಯ ಅರಣ್ಯ ಅಧಿಕಾರಿ ಸಂತೋಷ್, ಉಪ ವಲಯ ಅರಣ್ಯ ಅಧಿಕಾರಿ ಪ್ರಶಾಂತ್,ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಸದೇಪ ಮಾದರ,ಉಪ ವಲಯ ಅರಣ್ಯ ಅಧಿಕಾರಿ ಸೋಮನಾಥ್, ವಾಹನ ಚಾಲಕ ಜಯಪ್ರಕಾಶ್ ಕೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya
error: Content is protected !!