23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಅನುಮತಿ ಪಡೆಯದೆ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂದಾರು ಗ್ರಾಮದ ಪುನರಡ್ಕ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಹಲಸು ಮತ್ತು ಸಾಗುವಾನಿ ಮರಗಳನ್ನು ಕಡಿದು 14 ದಿಮ್ಮಿ ಮತ್ತು ಕಟ್ಟಿಗೆಯನ್ನಾಗಿ ಪರಿವರ್ತಿಸಿ ದಾಸ್ತಾನು ಮಾಡಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಂಚಾರಿ ಅರಣ್ಯ ದಳದ ಅಧಿಕಾರಿಗಳು ನ.21 ರಂದು ದಾಳಿ ಮಾಡಿ ಪತ್ತೆ ಹಚ್ಚಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಆರೋಪಿ ಕೊಯ್ಯೂರು ಗ್ರಾಮದ ಗುರ್ಬೊಟ್ಟು ನಿವಾಸಿ ದೂಜ ಎಂಬವರ ಮಗ ಪ್ರವೀಣ್ ವಿರುದ್ಧ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಪ್ರಕರಣ ದಾಖಲಾಯಿಸಿಕೊಂಡಿದ್ದಾರೆ.

ಮಂಗಳೂರು ಸಂಚಾರಿ ಅರಣ್ಯ ದಳದ ವಲಯ ಅರಣ್ಯ ಅಧಿಕಾರಿ ಸಂತೋಷ್, ಉಪ ವಲಯ ಅರಣ್ಯ ಅಧಿಕಾರಿ ಪ್ರಶಾಂತ್,ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಸದೇಪ ಮಾದರ,ಉಪ ವಲಯ ಅರಣ್ಯ ಅಧಿಕಾರಿ ಸೋಮನಾಥ್, ವಾಹನ ಚಾಲಕ ಜಯಪ್ರಕಾಶ್ ಕೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!