25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯದ ಬರವಣಿಗೆ” ವಿಷಯದ ಕುರಿತು ನ. 24 ರಂದು ವಿಶೇಷ ಕಾರ್ಯಾಗಾರವನ್ನು ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಾಗಾರವು ವಿದ್ಯಾರ್ಥಿಗಳ ಸಾಹಿತ್ಯ ಜ್ಞಾನ ವಿಸ್ತರಣೆಗೆ ಮಹತ್ವದ ವೇದಿಕೆಯಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗೀತಾ. ಡಿ ಹಾಗೂ ಸಂದ್ಯಾ ಎನ್ ಭಾಗವಹಿಸಿ ಕನ್ನಡ ಸಾಹಿತ್ಯದ ಪಾರಂಪರ್ಯ, ಅದರ ಐತಿಹಾಸಿಕ ಬೆಳವಣಿಗೆ, ಆಧುನಿಕ ಸಾಹಿತ್ಯದ ಪ್ರವೃತ್ತಿಗಳು, ವಿವಿಧ ಸಾಹಿತ್ಯ ಪ್ರಕಾರಗಳ ವಿಶಿಷ್ಟತೆ, ಹಾಗೂ ಉತ್ತಮ ಸಾಹಿತ್ಯ ರಚನೆಗೆ ಅಗತ್ಯವಾದ ತಂತ್ರಗಳು ಮತ್ತು ವಿಧಾನಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಮತ್ತು ಮನದಟ್ಟು ಆಗುವಂತೆ ವಿವರಿಸಿದರು.

ಕಾರ್ಯಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೊ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಹಿತ್ಯ ಆಸಕ್ತಿ ಮತ್ತು ಕೌಶಲ್ಯವನ್ನು ಉತ್ತೇಜಿಸಿದರು.

ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ಕನ್ನಡ ಭಾಷಾ ನೈಪುಣ್ಯ, ಸಾಹಿತ್ಯದ ಅರ್ಥೈಸುವ ಸಾಮರ್ಥ್ಯ ಮತ್ತು ಬರವಣಿಗೆಯ ಕೌಶಲ್ಯವನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರವಹಿಸಿತು.

Related posts

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!