23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯದ ಬರವಣಿಗೆ” ವಿಷಯದ ಕುರಿತು ನ. 24 ರಂದು ವಿಶೇಷ ಕಾರ್ಯಾಗಾರವನ್ನು ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಾಗಾರವು ವಿದ್ಯಾರ್ಥಿಗಳ ಸಾಹಿತ್ಯ ಜ್ಞಾನ ವಿಸ್ತರಣೆಗೆ ಮಹತ್ವದ ವೇದಿಕೆಯಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗೀತಾ. ಡಿ ಹಾಗೂ ಸಂದ್ಯಾ ಎನ್ ಭಾಗವಹಿಸಿ ಕನ್ನಡ ಸಾಹಿತ್ಯದ ಪಾರಂಪರ್ಯ, ಅದರ ಐತಿಹಾಸಿಕ ಬೆಳವಣಿಗೆ, ಆಧುನಿಕ ಸಾಹಿತ್ಯದ ಪ್ರವೃತ್ತಿಗಳು, ವಿವಿಧ ಸಾಹಿತ್ಯ ಪ್ರಕಾರಗಳ ವಿಶಿಷ್ಟತೆ, ಹಾಗೂ ಉತ್ತಮ ಸಾಹಿತ್ಯ ರಚನೆಗೆ ಅಗತ್ಯವಾದ ತಂತ್ರಗಳು ಮತ್ತು ವಿಧಾನಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಮತ್ತು ಮನದಟ್ಟು ಆಗುವಂತೆ ವಿವರಿಸಿದರು.

ಕಾರ್ಯಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೊ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಹಿತ್ಯ ಆಸಕ್ತಿ ಮತ್ತು ಕೌಶಲ್ಯವನ್ನು ಉತ್ತೇಜಿಸಿದರು.

ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ಕನ್ನಡ ಭಾಷಾ ನೈಪುಣ್ಯ, ಸಾಹಿತ್ಯದ ಅರ್ಥೈಸುವ ಸಾಮರ್ಥ್ಯ ಮತ್ತು ಬರವಣಿಗೆಯ ಕೌಶಲ್ಯವನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರವಹಿಸಿತು.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!