26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತಾಲೂಕು, ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ, ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಕ್ಕೇರಿ ಇಲ್ಲಿ 10 ನೇ ತರಗತಿ ವಿಧ್ಯಾರ್ಥಿ. ಸುಕ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ರವರ ಪುತ್ರ. ರಾಷ್ಟ್ರದ ಮಟ್ಟದ ಕಬಡ್ಡಿ ಪಂದ್ಯಾಟವು ಹರಿಯಾಣ ರಾಜ್ಯದಲ್ಲಿ ನಡೆಯಲಿದ್ದು, ಸೋಮವಾರ ಹರಿಯಾಣಕ್ಕೆ ತೆರಳಲಿದ್ದಾರೆ. ನವೆಂಬರ್ 27 ರಿಂದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯೊಬ್ಬ 17 ವರ್ಷ ವಯೋಮಾನದ ಸಬ್ ಜ್ಯೂನಿಯರ್ ವಿಭಾಗದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಕಬಡ್ಡಿ ಕ್ಷೇತ್ರದಲ್ಲಿ ಹೊಸ ಬರವಸೆ ಮೂಡಿದೆ

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya
error: Content is protected !!