22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ 4ನೇ ವಾರ್ಷಿಕ ಸಭೆ ನ.21 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಲೋಬೊ ಟವರ್ಸ್ ನಲ್ಲಿ ಜರಗಿತು.

ಅಧ್ಯಕ್ಷ ರೊನಾಲ್ಡ್ ಲೋಬೊರವರು ಪ್ರಾರ್ಥನೆ ಮೂಲಕ ಸಭೆಯನ್ನು ಪ್ರಾರಂಭಿಸಿ ಸ್ವಾಗತಿಸಿದರು. ಕಾರ್ಯದರ್ಶಿಗಳಾದ ಲ್ಯಾನ್ಸಿ ಪಿರೇರಾ ಒಂದು ವರ್ಷದಲ್ಲಿ ಸಂಘವು ನಡೆಸಿದಂತಹ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು. ಖಜಾಂಚಿ ಸುನಿಲ್ ಶೆಣೈರವರು ಕಳೆದ ವರ್ಷದ ಖರ್ಚು ವೆಚ್ಚಗಳನ್ನು ಸಭೆಯ ಮುಂದಿಟ್ಟು, ಅನುಮೋದನೆ ಪಡೆದರು. ಸಂಘವನ್ನು ಇನ್ನಷ್ಟು ಬಲಪಡಿಸುವುದು, ಹೊಸ ಸದಸ್ಯರ ಸೇರ್ಪಡೆ, ತುರ್ತು ನಿಧಿ ಸ್ಥಾಪನೆ ಇವುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸ್ಥಾಪಕ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಶಶಿಧರ ಪೈಯವರ ಧನ್ಯವಾದವಿತ್ತರು.

Related posts

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya
error: Content is protected !!