July 24, 2026
ತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಪ್ರಕರಣ ಹೈಕೋರ್ಟ್ ನಲ್ಲಿ ‌ನ.24 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ಎರಡು ವಾರಗಳ ಕಾಲ ಮಧ್ಯಂತರ ತಡೆ ಮುಂದೂಡಿದೆ.

ಬುರುಡೆ ಪ್ರಕರಣದ ಸಂಬಂಧ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಅಗಸ್ಟ್ 26 ರಂದು ಶೋಧ ನಡೆಸಿದಾಗ ಎರಡು ತಲವಾರು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ಎಸ್.ಐ.ಟಿ ಎಸ್ಪಿ ಸಿ.ಎ.ಸೈಮನ್ ಸೆಪ್ಟೆಂಬರ್‌ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಎಸ್.ಐ.ಟಿ ಅಧಿಕಾರಿಗಳು ಎರಡು ತಲವಾರು ಮತ್ತು ಒಂದು ಬಂದೂಕು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು. ಬಳಿಕ ತಿಮರೋಡಿ ತಲೆಮರೆಸಿಕೊಂಡು ವಕೀಲರ ಮೂಲಕ ಜಿಲ್ಲಾ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಜಾ ಮಾಡಿತ್ತು.

ಈ ಬಗ್ಗೆ ಹೈಕೋರ್ಟ್ ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿಗೆ ಹೈಕೋರ್ಟ್ ಪ್ರಕರಣ ತನಿಖೆ ತಡೆ ಕೋರಿತ್ತು. ನ.24 ರಂದು ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಮತ್ತು ಮಧ್ಯಂತರ ತಡೆಯಾಜ್ಞೆ ತೆರವು ಅರ್ಜಿ ಸಲ್ಲಿಸಲು ಸಮಯಾವಕಾಶ ಸರಕಾರಿ ವಕೀಲರು ಕೋರಿದ್ದು ಅದರಂತೆ ನ್ಯಾಯಾಲಯ ಎರಡು ವಾರಗಳ ಕಾಲಾವಕಾಶ ನೀಡಿದ್ದು ಅಲ್ಲಿಯವರೆಗೆ ಮಧ್ಯಂತರ ತಡೆ ಮುಂದುವರಿಕೆ‌.

Related posts

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya
error: Content is protected !!