September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತಾಲೂಕು, ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ, ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಕ್ಕೇರಿ ಇಲ್ಲಿ 10 ನೇ ತರಗತಿ ವಿಧ್ಯಾರ್ಥಿ. ಸುಕ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ರವರ ಪುತ್ರ. ರಾಷ್ಟ್ರದ ಮಟ್ಟದ ಕಬಡ್ಡಿ ಪಂದ್ಯಾಟವು ಹರಿಯಾಣ ರಾಜ್ಯದಲ್ಲಿ ನಡೆಯಲಿದ್ದು, ಸೋಮವಾರ ಹರಿಯಾಣಕ್ಕೆ ತೆರಳಲಿದ್ದಾರೆ. ನವೆಂಬರ್ 27 ರಿಂದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯೊಬ್ಬ 17 ವರ್ಷ ವಯೋಮಾನದ ಸಬ್ ಜ್ಯೂನಿಯರ್ ವಿಭಾಗದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಕಬಡ್ಡಿ ಕ್ಷೇತ್ರದಲ್ಲಿ ಹೊಸ ಬರವಸೆ ಮೂಡಿದೆ

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
error: Content is protected !!