July 24, 2026
ತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಪ್ರಕರಣ ಹೈಕೋರ್ಟ್ ನಲ್ಲಿ ‌ನ.24 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ಎರಡು ವಾರಗಳ ಕಾಲ ಮಧ್ಯಂತರ ತಡೆ ಮುಂದೂಡಿದೆ.

ಬುರುಡೆ ಪ್ರಕರಣದ ಸಂಬಂಧ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಅಗಸ್ಟ್ 26 ರಂದು ಶೋಧ ನಡೆಸಿದಾಗ ಎರಡು ತಲವಾರು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ಎಸ್.ಐ.ಟಿ ಎಸ್ಪಿ ಸಿ.ಎ.ಸೈಮನ್ ಸೆಪ್ಟೆಂಬರ್‌ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಎಸ್.ಐ.ಟಿ ಅಧಿಕಾರಿಗಳು ಎರಡು ತಲವಾರು ಮತ್ತು ಒಂದು ಬಂದೂಕು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು. ಬಳಿಕ ತಿಮರೋಡಿ ತಲೆಮರೆಸಿಕೊಂಡು ವಕೀಲರ ಮೂಲಕ ಜಿಲ್ಲಾ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಜಾ ಮಾಡಿತ್ತು.

ಈ ಬಗ್ಗೆ ಹೈಕೋರ್ಟ್ ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿಗೆ ಹೈಕೋರ್ಟ್ ಪ್ರಕರಣ ತನಿಖೆ ತಡೆ ಕೋರಿತ್ತು. ನ.24 ರಂದು ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಮತ್ತು ಮಧ್ಯಂತರ ತಡೆಯಾಜ್ಞೆ ತೆರವು ಅರ್ಜಿ ಸಲ್ಲಿಸಲು ಸಮಯಾವಕಾಶ ಸರಕಾರಿ ವಕೀಲರು ಕೋರಿದ್ದು ಅದರಂತೆ ನ್ಯಾಯಾಲಯ ಎರಡು ವಾರಗಳ ಕಾಲಾವಕಾಶ ನೀಡಿದ್ದು ಅಲ್ಲಿಯವರೆಗೆ ಮಧ್ಯಂತರ ತಡೆ ಮುಂದುವರಿಕೆ‌.

Related posts

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya
error: Content is protected !!