25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಅನುಮತಿ ಪಡೆಯದೆ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂದಾರು ಗ್ರಾಮದ ಪುನರಡ್ಕ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಹಲಸು ಮತ್ತು ಸಾಗುವಾನಿ ಮರಗಳನ್ನು ಕಡಿದು 14 ದಿಮ್ಮಿ ಮತ್ತು ಕಟ್ಟಿಗೆಯನ್ನಾಗಿ ಪರಿವರ್ತಿಸಿ ದಾಸ್ತಾನು ಮಾಡಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಂಚಾರಿ ಅರಣ್ಯ ದಳದ ಅಧಿಕಾರಿಗಳು ನ.21 ರಂದು ದಾಳಿ ಮಾಡಿ ಪತ್ತೆ ಹಚ್ಚಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಆರೋಪಿ ಕೊಯ್ಯೂರು ಗ್ರಾಮದ ಗುರ್ಬೊಟ್ಟು ನಿವಾಸಿ ದೂಜ ಎಂಬವರ ಮಗ ಪ್ರವೀಣ್ ವಿರುದ್ಧ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಪ್ರಕರಣ ದಾಖಲಾಯಿಸಿಕೊಂಡಿದ್ದಾರೆ.

ಮಂಗಳೂರು ಸಂಚಾರಿ ಅರಣ್ಯ ದಳದ ವಲಯ ಅರಣ್ಯ ಅಧಿಕಾರಿ ಸಂತೋಷ್, ಉಪ ವಲಯ ಅರಣ್ಯ ಅಧಿಕಾರಿ ಪ್ರಶಾಂತ್,ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಸದೇಪ ಮಾದರ,ಉಪ ವಲಯ ಅರಣ್ಯ ಅಧಿಕಾರಿ ಸೋಮನಾಥ್, ವಾಹನ ಚಾಲಕ ಜಯಪ್ರಕಾಶ್ ಕೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!