37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

ನ. 22.ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ, ಆಂತರಿಕ ಗುಣಮಟ್ಟ ಭರವಸೆ ಕೋಶ , ಮತ್ತು ಶಿಕ್ಷಕ ರಕ್ಷಕ ಸಂಘದ ಸಹಯೋಗದೊಂದಿಗೆ 2025-26ನೇ ಸಾಲಿನ ಪೋಷಕರ ಸಭೆಯನ್ನು ಆಯೋಜಿಸಲಾಯಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ವೈಲೆಟ್ ಮೋರಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಕುರಿತಾದ ಸೂಕ್ಷ್ಮ ವಿಚಾರಗಳನ್ನು ತಿಳಿಸಿದರು.
ಸಭಾಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ. ಕಾಲೇಜಿನಲ್ಲಿ ಲಭ್ಯವಿರುವ ಎಲ್ಲ ಸೌಲಭ್ಯಗಳ ಕುರಿತಾಗಿ ಸಮಗ್ರ ಮಾಹಿತಿ ನೀಡಿದರು ಮತ್ತು ವಿದ್ಯಾರ್ಥಿಗಳ ಪ್ರಗತಿಯೊಂದಿಗೆ ಸಂಸ್ಥೆಯ ಬೆಳವಣಿಗೆಗೆ ಸಹಕಾರ ನೀಡುವಂತೆ ತಿಳಿಸಿದರು. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಉಸ್ಮಾನ್ , ಜೊತೆ ಕಾರ್ಯದರ್ಶಿ ಪ್ರಮೀಳ ಹಾಗೂ ಪೋಷಕರು ಉಪಯುಕ್ತ ಮಾಹಿತಿಗಳನ್ನು ಸಭೆಯಲ್ಲಿ ಹಂಚಿಕೊಂಡರು.

ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಕುಶಾಲಪ್ಪ ಎಸ್ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು . ಶಿಕ್ಷಕ ರಕ್ಷಕ ಸಂಘದ ಸಂಚಾಲಕರಾದ ಸಹಪ್ರಾಧ್ಯಾಪಕ ನವೀನ್ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ, ವಿಭಾಗ ಮುಖ್ಯಸ್ಥರುಗಳು, ಹಾಗೂ ಉಪನ್ಯಾಸಕರು ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಿದರು.

ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಾಜೇಶ್ವರಿ ಎಚ್ ಎಸ್ ವಂದನಾರ್ಪಣೆ ಮಾಡಿದರು.
ಬಿಎ ವಿದ್ಯಾರ್ಥಿ ಜಗದೀಶ್ ಪ್ರಾರ್ಥನೆ ನೆರವೇರಿಸಿದರು. ಪ್ರಥಮ ಎಂ ಎ ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!