25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯ ವತಿಯಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

2005ರಲ್ಲಿ ಸರ್ಕಾರದಿಂದ ಅನುಮತಿ ಪಡೆಯುವಾಗ 2008ರ ವರೆಗೆ ಎಲ್ಲಾ ಕುಟುಂಬಗಳನ್ನು ಪುನ‌ರ್ ವಸತಿಗೊಳಿಸಿದಾಗ ಉಲ್ಲೇಖ ಮಾಡಿರುತ್ತಾರೆ ಆದರೆ 2025 ವರ್ಷ ಕಳೆದರೂ ಈವರೆಗೂ ಪುನರ್ವಸತಿ ಗೊಳಿಸುವ ಕಾರ್ಯ ಪೂರ್ಣಗೊಳಿಸುವುದಿಲ್ಲ. ಹಣದುಬ್ಬರದಿಂದ ಜಮೀನು ಮತ್ತು ಮನೆಗಳು ಸೇರಿದಂತೆ ಸರಕು ಸೇವೆಗಳ ಬೆಲೆಗಳು ಗಗನ ಕೇಳುತ್ತಿದ್ದ ಹಣದ ಮೌಲ್ಯಯು ಕಾಲಕಾಲಕ್ಕೆ ಏರಿಳಿತಕ್ಕೆ ಒಳಗಾಗುತ್ತಿದ್ದ ಶೇಕಡ ಐದರಿಂದ ಆರು ಪ್ರತಿಶತ ಹಣದ ಮೌಲ್ಯವು ಕಡಿಮೆಯಾಗಿರುತ್ತದೆ ಆದರೆ ಭೂಮಿಯ ಬೆಲೆಯು ನಾಲೈದು ಪಟ್ಟು ಹೆಚ್ಚಾಗಿರುತ್ತದೆ. ಈಗ ಕೊಡುತ್ತಿರುವ ಪುನರ್ವಸತಿ ಮೌಲ್ಯದಿಂದ ಅನೇಕ ಕುಟುಂಬಗಳು ಬೀದಿಯಲ್ಲಿ ಬೀಳುವ ಪರಿಸ್ಥಿತಿಯಲ್ಲಿದ್ದಾರೆ ಕಾರಣ ಸರ್ಕಾರ ಜಾಗವನ್ನು ಸಹ ನೀಡುತ್ತಿಲ್ಲ. ಹಾಗೂ ಸರ್ಕಾರ ನೀಡುತ್ತಿರುವ ಪುನರ್ವಸತಿ ಯೋಜನೆ ಅಡಿ ನೀರು ಹಣದಿಂದ ಬೇರೆ ಜಮೀನು ಮನೆಗಳನ್ನು ಕೊಳ್ಳಲು ಆಗುವುದಿಲ್ಲ ಆದ್ದರಿಂದ ಸರ್ಕಾರ ಯೋಜನೆಗಾಗಿ ಮೂಲ ನಿವಾಸಿಗಳು ತಾವು ಕಟ್ಟಿಕೊಂಡ ಬದುಕನ್ನು ಸರ್ಕಾರಕ್ಕೆ ಬಿಟ್ಟುಕೊಟ್ಟು ದಿಕ್ಕು ದೆಸೆ ಇಲ್ಲದೆ ಬಿಟ್ಟು ಹೋಗುವ ಪರಿಸ್ಥಿತಿ ಮತ್ತು ಸರ್ಕಾರ ಕೊಡುವ ಹಣ ನೆಲೆ ನಿಲ್ಲಲು ಸಾಕಾಗದೆ ಬೀದಿಯಲ್ಲಿ ಬೀಳುವ ಪರಿಸ್ಥಿತಿ ಒದಾಗಿ ಬಂದಿದೆ. ಆದ್ದರಿಂದ ಪುನ‌ರ್ ವಸತಿ ಪ್ಯಾಕೇಜ್ ನಲ್ಲಿ ಘೋಷಿಸಿರುವ ಎಲ್ಲಾ ಮೌಲ್ಯಗಳನ್ನು 2025 ಮಾರ್ಕೆಟ್ ದರಕ್ಕೆ ಹೋಲಿಕೆ ಮಾಡಿ ಮೇಲ್ಕಂಡ ಆದೇಶಗಳನ್ನು ಪುನ‌ರ್ ಪರಿಶೀಲಿಸಿ ಹೊಸ ಆದೇಶ ಮಾಡಿಸಿಕೊಡಬೇಕಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೀರೂರು ಸುಧಾಕರ್, ಅಂಬರೀಶ್, ನಾಗೇಶ್ ನಾಯಕ್, ಸುಧಾಕರ್, ದಿನೇಶ್ ಕೂಳೆಗದ್ದೆ ಪ್ರದೀಪ್ ಮುಂತಾದವರು ಹಾಜರಿದ್ದರು.

Related posts

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!