25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

ಬೆಳ್ತಂಗಡಿ: ಸುಮಾರು 35 ವರ್ಷ ಇತಿಹಾಸ ಹೊಂದಿದ್ದ ಜೆಸಿಐ ಉಜಿರೆ ಘಟಕವು ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಎಂಬ ನಾಮಕರಣದೊಂದಿಗೆ ಸೆ.26 ರಂದು ಉಜಿರೆಯಲ್ಲಿ ಮರುಸ್ಥಾಪನೆಯಾಯಿತು. ಉಜಿರೆಯ ಪ್ರಗತಿ ಮಹಿಳಾ ಮಂಡಲ ಸಭಾಂಗಣದಲ್ಲಿ ನಡೆದ ಸರಳ ಪದಪ್ರಧಾನ ಸಮಾರಂಭದಲ್ಲಿ ಜೆಸಿಐ ಬೆಳ್ತಂಗಡಿಯ ಘಟಕಾಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ರವರು ಸಭಾಧ್ಯಕ್ಷತೆ ವಹಿಸಿ, ಸ್ವಾಗತಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜೆಸಿಐ ಭಾರತದ ರಾಷ್ಟೀಯ ತರಬೇತುದಾರರಾದ, ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ವಸತಿ ಕಾಲೇಜು ಉಜಿರೆ ಇದರ ನಿವೃತ್ತ ಪ್ರಾಂಶುಪಾಲರು ಡಾ. ಟಿ. ಕೃಷ್ಣಮೂರ್ತಿಯವರು ಜೆಸಿಐ ಉಜಿರೆ ಸಿಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತರಬೇತಿಯೇ ಜೆಸಿ ಸಂಸ್ಥೆಯ ಜೀವಾಳ, ತರಬೇತಿಯಿಂದ ಸಾಮಾನ್ಯನು ಅಸಾಮಾನ್ಯ ನಾಗಬಲ್ಲನು ಎಂದು ಉದಾಹರಣೆಗಳೊಂದಿಗೆ ಸಭೆಯಲ್ಲಿದ್ದವರನ್ನು ಪ್ರೇರೇಪಿಸಿದರು. ಜೆಸಿಐ ಉಜಿರೆ ಸಿಟಿ ಉಜಿರೆ ಪರಿಸರದಾದ್ಯಂತ ವ್ಯಾಪಕವಾಗಿ ಹರಡಲಿ ಹೆಚ್ಚಿನ ಯುವಕರು ಈ ಸಂಸ್ಥೆ ಸೇರುವಂತಾಗಲಿ ಎಂದು ಶುಭ ಹಾರೈಸಿದರು.

ಪದ ಪ್ರಧಾನ ಅಧಿಕಾರಿಯಾಗಿ ಸಭೆಯಲ್ಲಿ ಉಪಸ್ಥಿತರಿದ್ದ ಜೆಸಿಐ ವಲಯ 15ರ ಪ್ರಾಂತ್ಯ ‘ಡಿ’ ಇದರ ಉಪಾಧ್ಯಕ್ಷರು, ಉಪನ್ಯಾಸಕರಾದ ಜೆಸಿ ರಂಜಿತ್ ಹೆಚ್.ಡಿ ಇವರು ಹೊಸ ಜೆಸಿಗಳಿಗೆ ಪ್ರಮಾಣವಚನ ಬೋಧಿಸಿ ಅಭಿನಂದಿಸಿದರು.
ತಮ್ಮ ಜೀವನದ ಮೌಲ್ಯಗಳನ್ನು ವೃದ್ಧಿಸಿಕೊಳ್ಳಲು ಹಾಗೂ ವ್ಯಕ್ತಿತ್ವ ವಿಕಸನವನ್ನು ರೂಪಿಸಲು ಅಂತರಾಷ್ಟ್ರೀಯ ಸಂಸ್ಥೆಯಾದ ಜೆಸಿಯಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು. ಉಜಿರೆ ಜೆಸಿಯ ಹೊಸ ಹೆಸರಿನ ಅನಿವಾರ್ಯತೆಯ ಬಗ್ಗೆ ವಿವರಿಸಿದರು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಇವರು ಮಹಮ್ಮದ್ ಮಿರ್ಷಾದ್ ಇವರಿಗೆ ಪ್ರಮಾಣವಚನ ಬೋಧಿಸಿ ಕಾಲರ್ ಮತ್ತು ಗ್ಯಾವಲ್ ಹಸ್ತಾಂತರಿಸುವ ಮೂಲಕ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸಿದರು.

ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಹಮ್ಮದ್ ಮಿರ್ಷಾದ್ ಇವರು ಸಭೆಯನ್ನು ಉದ್ದೇಶಿಸಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಈ ಘಟಕದ ಶ್ರೇಯೋಭಿವೃದ್ಧಿಗಾಗಿ ಜೇಸಿ ಸದಸ್ಯರ, ಜೆಸಿಐ ಉಜಿರೆಯ ಪೂರ್ವ ಅಧ್ಯಕ್ಷರ ಹಾಗೂ ಊರವರ ಸಹಕಾರ ಕೋರಿ ಪದ ಸ್ವೀಕಾರ ಭಾಷಣ ಮಾಡಿದರು.

ನೂತನ ತಂಡದ ಕಾರ್ಯದರ್ಶಿಯಾಗಿ ಭವ್ಯಶ್ರೀ ಕೀರ್ತಿರಾಜ್, ಉಪಾಧ್ಯಕ್ಷರುಗಳಾಗಿ ಪ್ರವೀಣ್ ಎನ್ ‘ಶಿವಗಿರಿ’, ರಾಜೇಶ್ ಕೆ ‘ತ್ರಿಶೂಲ್’, , ಜನಾರ್ಧನ ಕಾನರ್ಪ, ನಜೀರ್ ಚಾರ್ಮಡಿ, ಜಿತೇಶ್ ಜೈನ್, ಮೊಹಮ್ಮದ್ ಅಝರುದ್ಧಿನ್, ರಂಜನ್ ಎಸ್, ಕೋಶಾಧಿಕಾರಿಯಾಗಿ ಥಲ್ಹತ್ ಎಂ ಜಿ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್, ನಿರ್ದೇಶಕರುಗಳಾಗಿ ದೀಕ್ಷಿತ್ ರೈ, ಅಹ್ಮದ್ ಬಶೀರ್, ಗಿರೀಶ್, ಕಿರಣ್ ಶೆಟ್ಟಿ ಧರ್ಮಸ್ಥಳ,ಮೊಹಮ್ಮದ್ ಅರ್ಷಾದ್, ಮಹಿಳಾ ಸಂಯೋಜಕಿಯಾಗಿ ಹೇಮಾವತಿ ಕೆ ಆಯ್ಕೆಯಾಗಿದ್ದಾರೆ.

ಜೆಸಿಐ ಉಜಿರೆ ಘಟಕದ ಪೂರ್ವ ಅಧ್ಯಕ್ಷರಾದ ಡಾ. ಕುಮಾರ್ ಹೆಗ್ಡೆ ಹಾಗೂ ಶ್ರೀನಾಥ್ ಎಂಪಿ ಉಪಸ್ಥಿತರಿದ್ದು ನಮ್ಮ ಸಂಪೂರ್ಣ ಸಹಕಾರ ಈ ಘಟಕದ ಮೇಲೆ ಸದಾ ಇರುತ್ತದೆ ಎಂದು ಶುಭ ಹಾರೈಸಿದರು.

ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷ ಜೇಸಿ ಪ್ರಶಾಂತ್ ಲಾೖಲ ಇವರು ಹೊಸ ಸದಸ್ಯರನ್ನು ಸಭೆಗೆ ಪರಿಚಯಿಸಿದರು. ಜೆಸಿಐ ಉಜಿರೆ ಸಿಟಿಯ ನೂತನ ಅಧ್ಯಕ್ಷರಾಗಿ ಮಹಮ್ಮದ್ ಮಿರ್ಷಾದ್ ಇವರನ್ನು ಜೆಸಿ ಅಬ್ದುಲ್ ಖಾದರ್ ಸಭೆಗೆ ಪರಿಚಯಿಸಿದರು.
ಜೆಸಿ ಅನುದೀಪ್ ಜೈನ್ ಇವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಚಿತ್ರಪ್ರಭ ಜೇಸಿ ವಾಣಿ ಉದ್ಘೋಷಿಸಿದರು, ರಂಜನ್ ಗುಡಿಗಾರ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು, ಜೆಸಿಐ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೋದ್ ಕೆ ಧನ್ಯವಾದವಿತ್ತರು.

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya
error: Content is protected !!