25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ವರದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

ಬೆಳ್ತಂಗಡಿ: ಕಾವೂರು ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ, 2022 ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2023 ರಲ್ಲಿ ದಾಖಲಾಗಿದ್ದ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಒಂದೂವರೆ ವರ್ಷದಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಮುಗುಳಿ ಹೊಸಮನೆ ನಿವಾಸಿ ತಿಮ್ಮಪ್ಪ ಶೆಟ್ಟಿ ಮಗ ದಿನೇಶ್ ಶೆಟ್ಟಿ @ ದಿನ್ನು ನನ್ನು ಮಂಗಳೂರು ಎಸಿಪಿ ಉತ್ತರ ಉಪವಿಭಾಗ ಹಾಗೂ ಅವರ ತಂಡ ನ.25 ರಂದು ಬಂಧಿಸಿದ್ದಾರೆ.

ಇನ್ನು ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ರವರಿಂದ ಸುಪಾರಿ ಪಡೆದು ನ್ಯಾಯವಾದಿ ಖಾಸೀಂ ನೌಷಾದ್ ನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಈತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿ ನಂತರ ಉಚ್ಛ ನ್ಯಾಯಾಲಯಕ್ಕೆ ಅಫೀಲು ಸಲ್ಲಿಸಿ ಡಿಸೆಂಬರ್ 2019 ರಲ್ಲಿ ಬಿಡುಗಡೆಗೊಂಡಿದ್ದ. ಇದೀಗ ಕೋರ್ಟ್ ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ದಿನೇಶ್ ಶೆಟ್ಟಿ ಮತ್ತೆ ಜೈಲು ಸೇರಿದ್ದಾನೆ.

Related posts

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!