September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ವರದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

ಬೆಳ್ತಂಗಡಿ: ಕಾವೂರು ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ, 2022 ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2023 ರಲ್ಲಿ ದಾಖಲಾಗಿದ್ದ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಒಂದೂವರೆ ವರ್ಷದಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಮುಗುಳಿ ಹೊಸಮನೆ ನಿವಾಸಿ ತಿಮ್ಮಪ್ಪ ಶೆಟ್ಟಿ ಮಗ ದಿನೇಶ್ ಶೆಟ್ಟಿ @ ದಿನ್ನು ನನ್ನು ಮಂಗಳೂರು ಎಸಿಪಿ ಉತ್ತರ ಉಪವಿಭಾಗ ಹಾಗೂ ಅವರ ತಂಡ ನ.25 ರಂದು ಬಂಧಿಸಿದ್ದಾರೆ.

ಇನ್ನು ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ರವರಿಂದ ಸುಪಾರಿ ಪಡೆದು ನ್ಯಾಯವಾದಿ ಖಾಸೀಂ ನೌಷಾದ್ ನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಈತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿ ನಂತರ ಉಚ್ಛ ನ್ಯಾಯಾಲಯಕ್ಕೆ ಅಫೀಲು ಸಲ್ಲಿಸಿ ಡಿಸೆಂಬರ್ 2019 ರಲ್ಲಿ ಬಿಡುಗಡೆಗೊಂಡಿದ್ದ. ಇದೀಗ ಕೋರ್ಟ್ ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ದಿನೇಶ್ ಶೆಟ್ಟಿ ಮತ್ತೆ ಜೈಲು ಸೇರಿದ್ದಾನೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!