23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಡಿ. 7ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾಕೂಟ 2025 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ ಧರ್ಮಸ್ಥಳ ಗ್ರಾಮದಲ್ಲಿ ನಡೆಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್, ಯುವ ಬಿಲ್ಲವ ವೇದಿಕೆ ಕ್ರೀಡಾ ಕಾರ್ಯದರ್ಶಿ ದೇವಿಪ್ರಸಾದ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲಾ ಪರಮೇಶ್ವರ್, ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಪ್ರಕಾಶ್ ಪೂಜಾರಿ, ಎಸ್.ಎನ್.ಡಿ.ಪಿ ಉಪಾಧ್ಯಕ್ಷ ಸಚಿನ್ ಇಂಚರ, ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ , ಪಂಚಾಯತ್ ಸದಸ್ಯರಾದ ಸುನಿತಾ ಶ್ರೀಧರ್ ಪೂಜಾರಿ, ಶ್ರೀ ನಾರಾಯಣ ಗುರು ಗ್ರಾಮ ಸಮಿತಿ ಗೌರವ ಅಧ್ಯಕ್ಷ ಪುರುಷೋತ್ತಮ್ ಪೂಜಾರಿ ಮೂಡಂಗಲ್, ಕಾರ್ಯದರ್ಶಿ ಯಶೋಧರ ಪೂಜಾರಿ, ಉಪಾಧ್ಯಕ್ಷ ಶ್ರೀಧರ್ ಪೂಜಾರಿ, ಪ್ರಭಾಕರ್ ಪೂಜಾರಿ ಧರ್ಮಸ್ಥಳ, ವೇದ ಪ್ರಭಾಕರ, ಸದಾಶಿವ ಕಾಮದೇನು, ರಘು ದೊಂಡೋಲೆ, ವಸಂತ ಸುವರ್ಣ, ಶ್ರೀ ಗುರುದೇವ ಸಂಘ ಜೋಡುಸ್ಥಾನ ಸದಸ್ಯರು ಮತ್ತು ಧರ್ಮಸ್ಥಳ ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಎಸ್.ಎನ್.ಡಿ.ಪಿ ಧರ್ಮಸ್ಥಳ ಸದಸ್ಯರು ಉಪಸ್ಥಿತರಿದ್ದರು.

ಸೂರ್ಯ ಪ್ರಕಾಶ್ ದೊಂಡೋಲೆ ಕಾರ್ಯಕ್ರಮ ನಿರೂಪಿಸಿ, ರೂಪೇಶ್ ಧರ್ಮಸ್ಥಳ ಸ್ವಾಗತಿಸಿದರು.

Related posts

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya
error: Content is protected !!