25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.

ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Related posts

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!