22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

ಹರಿದ್ವಾರ: ದೇಶದ ಸುಭಿಕ್ಷತೆಗೆ ಸಂತ- ಮಹಂತರ ಪ್ರಯತ್ನವೂ ಅಗತ್ಯ. ಸ್ವಸ್ಥ ಸಮಾಜದ ಗುರಿಗೆ ನಾವೆಲ್ಲರೂ ಕಟೀ ಬದ್ಧರಾಗೋಣ ಎಂದು ೧೦೦೮ ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ನುಡಿದರು.

ಅವರು ಹರಿದ್ವಾರದ ಭೂಪತ್‌ವಾಲಾದಲ್ಲಿರುವ ತಮ್ಮ ಸಾಧನಾ ಕುಟೀರ(ಮಠ)ದ ೯ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಮಹಂತರಾದ ವಿದ್ಯಾನಂದ ಸರಸ್ವತೀ ಮಹಾರಾಜ್, ಮಹೇಶ್‌ಪುರಿಜೀ, ಲಲಿತಾನಂದ ಗಿರೀಜೀ ಮಹಾರಾಜ್, ಹರಿಚೇತನಾಂದಜೀ ಮಹಾರಾಜ್, ಇಂದ್ರಾನಂದ ಸರಸ್ವತೀ ಮಹಾರಾಜ್, ಗಗನದೇವ ಮಹಾರಾಜ್, ಸಹಜಾನಂದ ಸರಸ್ವತೀ ಮಹಾರಾಜ್, ಧೀರೇಂದ್ರ ಪುರಿ ಮಹಾರಾಜ್ ವಿರಾಜಮಾನರಾಗಿದ್ದರು.

ಮಹಂತ ದೇವಾನಂದ ಮಹಾರಾಜ್ ಅಧ್ಯಕ್ಷತೆ ವಹಿಸಿದ್ದರು.

ಉತ್ತರಾಖಂಡದ ಶಾಸಕ, ಬಿಜೆಪಿ ಮಾಜಿ ಅಧ್ಯಕ್ಷ ಮದನ್ ಕೌಶಿಕ್, ಶಾಸಕರಾದ ಹರೀಶ್ ಪೂಂಜ, ಭೀಮಣ್ಣ ನಾಯಿಕ, ಬೆಹರಿನ್ ಶ್ರೀರಾಮ ಕ್ಷೇತ್ರ ಸಮಿತಿ ಅಧ್ಯಕ್ಷ, ಜಯಶಂಕರ್ ವಿಶ್ವನಾಥ್, ಗಲ್ಫ್ ಫೌಂಡೇಶನ್ ಅಧ್ಯಕ್ಷ ಹರೀಶ್ ಪೂಜಾರಿ,ರಾಜ್ಯದ ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಉದ್ಯಮಿಗಳಾದ ಬಾಬು ಪೂಜಾರಿ, ಕಿರಣ್‌ಚಂದ್ರ ಪುಷ್ಪಗಿರಿ, ಕಿರಣ್‌ಕುಮಾರ್ ಕೊಡಿಕಲ್, ಅನಿರುದ್ಧ ಭಾಟಿಯಾ, ಬೆಳ್ತಂಗಡಿಯ ಸಂತೋಷ್ ಕುಮಾರ್ ಕಾಪಿನಡ್ಕ. ಸೀತಾರಾಮ ಬೆಳಾಲು, ರವೀಂದ್ರ ಪೂಜಾರಿ ಆರ್ಲ, ದ.ಕ.ಉಡುಪಿ, ಉ.ಕ.ದಿಂದ ೧೫೦ ಕ್ಕೂ ಹೆಚ್ಚು ಶ್ರೀಗಳ ಶಿಷ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗೌರೀಶಂಕರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya
error: Content is protected !!