ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಒಂಭತ್ತು ವರ್ಷಗಳಿಂದ ಸಮಾಜಮುಖಿ ಸೇವಾಕಾರ್ಯಗಳಲ್ಲಿ ತೊಡಗಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಕುದ್ಯಾಡಿ ಇಲ್ಲಿ ಅಗತ್ಯವಿರುವ ಪ್ರಿಂಟರ್ ಖರೀದಿಗೆ ಆರ್ಥಿಕ ಸಹಕಾರವನ್ನು ಹಸ್ತಾಂತರ ಮಾಡಲಾಯಿತು.
ಸಂಘಟನೆಯ ಸಲಹೆಗಾರರಾದ ಸದಾಶಿವ ಶೆಟ್ಟಿ ಹೊಸಮನೆ ಅರುವ ಇವರು ಹಸ್ತಾಂತರಿಸಿದರು.
ಶಾಲೆಯ ಪ್ರಗತಿಗೆ ಅಹರ್ನಿಶಿ ಶ್ರಮಿಸುತ್ತಿರುವ ಶಿಕ್ಷಕರಾದ ನಾಗಭೂಷಣ್ ರವರನ್ನು ಅಳದಂಗಡಿ ಸತ್ಯದೇವತಾ ಕಲಾ ತಂಡದ ಪೂರ್ವಾಧ್ಯಕ್ಷ ಸುಂದರ ಪೂಜಾರಿ ನೀರಲ್ಕೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಮನೀತ್ ಅರ್ವ, ಅಭಿಷೇಕ್ ಎನ್, ಶ್ರೀನಾಥ್ ಶೆಟ್ಟಿ, ಇರ್ಷಾದ್ ಶಿರ್ಲಾಲು ರವರು ಉಪಸ್ಥಿತರಿದ್ದರು.











