July 23, 2026
ತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ ಕ ಜಿಲ್ಲೆ ಮಂಗಳೂರು ಹಾಗೂ ಸೈಂಟ್ ಫಿಲೋಮಿನಾ ಕಾಲೇಜು ಪುತ್ತೂರು ಇದರ ಸಹಭಾಗಿತ್ವದಲ್ಲಿ ನ.20 ರಂದು ಪುತ್ತೂರಿನ ಸೈಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಹಲವಾರು ಪ್ರಶಸ್ತಿಗಳನ್ನು ಗಳಿಸಿದೆ.

ದ್ವಿತೀಯ ಪಿಯುಸಿ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರೀತಮ್ ಶೆಟ್ಟಿಗಾರ್ ಪೈಂಟಿಂಗ್ ನಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಹಂಸಿನಿ ಭಿಡೆ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಕಲಾ ವಿಭಾಗದ ಅನಘಾ ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಹಾಗೂ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಪ್ರಥಮ ಪಿಯುಸಿ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸಾತ್ವಿಕ್ ಭಟ್ ಪೈಂಟಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರಥಮ ವಿಜ್ಞಾನ ವಿಭಾಗದ ಸಾಗರೀಕಾ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಥಮ ಕಲಾ ವಿಭಾಗದ ಮನೋಜ್ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಉಡುಪಿಯಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!